ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶುಕ್ರವಾರ ಬೆಳಗ್ಗೆ 6.30ಕ್ಕೆ ಮಹಾನಗರ ಪಾಲಿಕೆ ಆರೋಗ್ಯ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ನೇತೃತ್ವದಲ್ಲಿ ಅಧಿಕಾರಿಗಳು ನಗರದ ವಿವಿಧೆಡೆ ದಾಳಿ ನಡೆಸಿ ಪರಿಶೀಲಿಸಿದರು.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ನಗರದಲ್ಲಿರುವ ಇಂದಿರಾ ಕ್ಯಾಂಟೀನ್, ಬೇಕರಿ, ಹೋಟೆಲ್ ಹಾಗೂ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿದ ಅವರು ಅಲ್ಲಿನ ಶುಚಿತ್ವ, ಟ್ರೇಡ್ ಲೈಸೆನ್ಸ್ ಪರಿಶೀಲಿಸಿದರು.
ಟ್ರೇಡ್ ಲೈಸೆನ್ಸ್ ಇಲ್ಲದೇ ವ್ಯಾಪಾರ | ಕೆಲವು ಅಂಗಡಿಗಳಿಗೆ ಲೈಸೆನ್ಸ್ ಇಲ್ಲದೇ ನಡೆಸುತ್ತಿರುವುದು ಪರಿಶೀಲನೆ ವೇಳೆ ಗಮನಕ್ಕೆ ಬಂತು. ಇಂತಹ ಅಂಗಡಿಗಳಿಗೆ ಪಾಲಿಕೆಯಿಂದ ನೋಟಿಸ್ ನೀಡುವುದಾಗಿ ಎಚ್ಚರಿಸಿದರು. ಕೂಡಲೇ ಲೈಸೆನ್ಸ್ ಪಡೆದು ವ್ಯಾಪಾರ ಮುಂದುವರಿಸುವಂತೆ ಸೂಚನೆ ನೀಡಿದರು.
ಇಂದಿರಾ ಕ್ಯಾಂಟಿನ್ ನಲ್ಲಿ ಸಿದ್ಧಪಡಿಸಲಾಗುತ್ತಿರುವ ಆಹಾರದಲ್ಲಿ ಶುಚಿತ್ವ ಕಾಪಾಡುವಂತೆ ತಿಳಿಸಿದರು. ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.