ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹೊಸನಗರ ತಾಲೂಕಿನ ಚಕ್ರಾ ಡ್ಯಾಂನಲ್ಲಿಈಜಲು ಹೋಗಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ವ್ಯಕ್ತಿಯ ಶವ ಭಾನುವಾರ ಸಂಜೆ ಸಿಕ್ಕಿದೆ.
ಇದನ್ನೂ ಓದಿ | ದೇವಸ್ಥಾನಕ್ಕೆ ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರು, ಚಕ್ರಾ ಹಿನ್ನೀರಿನಲ್ಲಿ ಮುಳುಗಿ ಒಬ್ಬ ಸಾವು, ಮತ್ತೊಬ್ಬ ನಾಪತ್ತೆ
ಮೃತಪಟ್ಟ ವ್ಯಕ್ತಿಯನ್ನು ಶ್ರೀಹರಿ (58) ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಶವವನ್ನು ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಿಂದ ದೇವರ ದರ್ಶನಕ್ಕೆ ಮಹಿಳೆಯರು ಸೇರಿ 16 ಜನ ಬಂದಿದ್ದರು. ಶನಿವಾರ ಈಜಲು ಹೋಗಿ ಡ್ಯಾಂ ಪಾಲಾಗಿದ್ದರು. ಅದರಲ್ಲಿ ವಿಶ್ವೇಶ್ವರ್ ಎಂಬಾತನನ್ನು ತಕ್ಷಣ ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.