ಸುದ್ದಿ ಕಣಜ.ಕಾಂ
ಹೊಸನಗರ: ತಾಲೂಕಿನ ಚಕ್ರಾ ಹಿನ್ನೀರಿನಲ್ಲಿ ಮುಳುಗಿ ಒಬ್ಬರು ಮೃತಪಟ್ಟಿದ್ದು, ಅದರಲ್ಲಿ ಒಬ್ಬರು ನಾಪತ್ತೆಯಾಗಿದ್ದಾರೆ. ಅವರ ಶೋಧ ಕಾರ್ಯ ನಡೆದಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಚಕ್ರಾನಗರದಲ್ಲಿರುವ ಮತ್ತೂರು ಶ್ರೀ ವನದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬೆಂಗಳೂರಿನ ಬಸವನಗುಡಿಯಿಂದ ಮಹಿಳೆಯರು ಸೇರಿ ಒಟ್ಟು 16 ಜನ ಬಂದಿದ್ದರು. ಹಿನ್ನೀರಿನಲ್ಲಿ ಈಜಲು ಹೋದಾಗ ಘಟನೆ ನಡೆದಿದೆ.
ಮೃತನನ್ನು ವಿಶ್ವೇಶ್ವರ್ (58) ಎಂದು ಪತ್ತೆ ಹಚ್ಚಲಾಗಿದೆ. ಹರಿ (58) ಎಂಬಾತ ಹಿನ್ನೀರಿನಲ್ಲೇ ನಾಪತ್ತೆಯಾಗಿದ್ದಾರೆ. ಅವರ ಶೋಧ ಕಾರ್ಯ ನಡೆದಿದೆ.
ಇದನ್ನೂ ಓದಿ | ಎರಡು ಗಂಟೆ ನಡೀತು ಆಪರೇಷನ್, 8 ಕೆಜಿ ಗಡ್ಡೆ ಹೊರತೆಗದ ವೈದ್ಯರು
ಹಿನ್ನೀರಿನಲ್ಲಿ ಈಜಲು ಹೋಗಿ ಮುಳುಗಿದ್ದ ವಿಶ್ವೇಶ್ವರ್ ಅವರನ್ನು ತಕ್ಷಣ ರಕ್ಷಿಸಿ ಮಾಸ್ತಿಕಟ್ಟಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚುವರಿ ಚಿಕಿತ್ಸೆಗೋಸ್ಕರ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.