ಸುದ್ದಿ ಕಣಜ.ಕಾಂ
ಸಾಗರ: ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬರಿಗೆ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, 8 ಕೆ.ಜಿ. ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ.
ಸೊರಬ ತಾಲೂಕಿನ 21 ವರ್ಷದ ಯುವತಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಸ್ಕ್ಯಾನಿಂಗ್ ಮಾಡಿದಾಗ ಗಡ್ಡೆ ಇರುವುದು ಗೊತ್ತಾಗಿದೆ. ಅದನ್ನು ಹಾಗೆಯೇ ಬಿಟ್ಟಲ್ಲಿ ಕ್ಯಾನ್ಸರ್ ಅಪಾಯವಿತ್ತು. ಹೀಗಾಗಿ, ಶಸ್ತ್ರಚಿಕಿತ್ಸೆ ಮೂಲಕ ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ.
ಪ್ರಸೂತಿ ತಜ್ಞೆ ಡಾ.ಪ್ರತಿಮಾ, ವೈದ್ಯರಾದ ಡಾ.ಪ್ರಕಾಶ್ ಭೋಸ್ಲೆ, ಸಿಬ್ಬಂದಿ ರೀಟಾ, ರೋಹಿಣಿ, ಚಂದ್ರು ಅವರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.