ಸುದ್ದಿ ಕಣಜ.ಕಾಂ
ಶಿವಮೊಗ್ಗ/ಬೆಂಗಳೂರು: ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೆÇಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ ಘಟನೆ ಸೋಮವಾರ ನಡೆದಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಸಿ.ಡಿ ಪ್ರಕರಣದಲ್ಲಿ ಸಿಲುಕಿರುವ ಶಾಸಕ ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ, ಕೂಡಲೇ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಇದನ್ನೂ ಓದಿ | 20 ದಿನಗಳಿಂದ ಬಂದ್ ಇದ್ದ ಹೊನ್ನಾಳಿ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಗಿರೀಶ್, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಈ.ಟಿ.ನಿತೀನ್, ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಕುಮಾರೇಶ್, ಉಮೇಶ್ ಬಾಳೆಗುಂಡಿ, ಅರುಣ್ ನವುಲೆ ಸೇರಿದಂತೆ ಹಲವೆಡೆಯಿಂದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.