ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಎಂ.ಎಲ್. ನಗರ ಸೇರಿದಂತೆ ಹಲವೆಡೆ ರಾತ್ರಿ ಹೊತ್ತಲ್ಲಿ ಕಿಡಿಗೇಡಿಗಳು ಗಾಂಜಾ ಸೇವನೆ ಮಾಡುತ್ತಿರುತ್ತಾರೆ. ಜನ ಓಡಾಡುವುದಕ್ಕೂ ತೊಂದರೆ ಆಗುತ್ತಿದೆ. ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಮೇಯರ್ ಅವರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಮಳೆ ಬಂದಲ್ಲಿ ಮನೆಯೊಳಗೆ ನೀರು ನುಗ್ಗುತ್ತವೆ. ಭಾರಿ ಸೊಳ್ಳೆಗಳ ಕಾಟವಿದೆ. ಬಾಕ್ಸ್ ಚರಂಡಿಯ ಕಾಮಗಾರಿ ಮಾಡಲಾಗುತ್ತಿದೆ. ಆದರೆ, ಅದು ಕಳಪೆಯಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.
ಮೇಯರ್ ಸುನೀತಾ ಅಣ್ಣಪ್ಪ ಅವರು ಆರ್.ಎಂ.ಎಲ್. ನಗರಕ್ಕೆ ಮಂಗಳವಾರ ಭೇಟಿ ನೀಡಿದಾಗ ಅಲ್ಲಿಯ ಜನ ಸಮಸ್ಯೆಗಳನ್ನು ತೋಡಿಕೊಂಡರು.
ಇದನ್ನೂ ಓದಿ | ಬಿಪಿಎಲ್ ಕಾರ್ಡ್ ಪಡೆಯಲು ಯಾರು ಅರ್ಹರು?, ಅನರ್ಹರು ಕಾರ್ಡ್ ಹಿಂದಿರುಗಿಸಲು ಡಿಸಿ ಖಡಕ್ ವಾರ್ನಿಂಗ್
ಬೇಡಿಕೆಗಳೇನು
- ಕೊಳಚೆ ನೀರು ಆರ್.ಎಂ.ಎಲ್. ನಗರಕ್ಕೆ ನುಗ್ಗದಂತೆ ಬದಲಿ ವ್ಯವಸ್ಥೆ ಕಲ್ಪಿಸಿ.
- ಬಾಕ್ಸ್ ಡ್ರೈನೇಜ್, ರಾಜಾಕಾಲುವೆ ಹೂಳು ಕೂಡಲೇ ಹೊರಗೆ ತೆಗೆದು ನೀರು ಸರಾಗವಾಗಿ ಹರಿಯಲು ಅನುಕೂಲ ಮಾಡಬೇಕು.
- ಪ್ರತ್ಯೇಕ ಸಂಗ್ರಹಣಾ ಕೇಂದ್ರದಿಂದ ಜ್ಯಾಕ್ವೆಲ್ ಪಂಪಿಂಗ್ ಮುಖೇನ ಮೇಲೆತ್ತಿಸಿ, ಮುಖ್ಯ ನಿರ್ವಹಣಾ ಕೇಂದ್ರಕ್ಕೆ ಜೋಡಣೆ ಮಾಡಿ ಮಳೆಗಾಲದಲ್ಲಿ ನೀರು ನುಗ್ಗುವ ಸಮಸ್ಯೆಯನ್ನು ಪರಿಹರಿಸಬೇಕು.
ಅಗತ್ಯ ಕ್ರಮಕೈಗೊಳ್ಳುವ ಭರವಸೆ | ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಮೇಯರ್ ಅವರು ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗುವುದು. ಬಳಿಕ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಉಪ ಮೇಯರ್ ಶಂಕರ್ ಗನ್ನಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಧೀರರಾಜ್ ಹೊನ್ನವಿಲೆ, ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.