ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿಯೊಬ್ಬರು ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಾರೆಬೈಲು ಗ್ರಾಮದ ನಿವಾಸಿ ಜಗದೀಶ್ ಶೆಟ್ಟಿ (51) ಮೃತಪಟ್ಟಿದ್ದಾರೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಕೊಲೆ ಪ್ರಕರಣ ಸಂಬಂಧ ಜಗದೀಶ್ ಅವರಿಗೆ 2018ರಲ್ಲಿ ಜೈಲು ಶಿಕ್ಷೆಯಾಗಿತ್ತು. ಈತನಿಗೆ 7 ವರ್ಷ ಕಠಿಣ ಶಿಕ್ಷೆ, 10 ಸಾವಿರ ರೂಪಾಯಿ ದಂಡ ವಿಧಿಸಿ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿತ್ತು.
ಅಗರ್ ಬತ್ತಿ ವಿಭಾಗದಲ್ಲಿ ಕೆಲಸ ಮಾಡುವಾಗ ಮಂಗಳವಾರ ಈತ ಕುಸಿದು ಬಿದ್ದು ಅಸ್ವಸ್ಥನಾಗಿದ್ದಾನೆ. ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಜಗದೀಶ್ ಅವರು ಹೃದಯ ರೋಗಕ್ಕೆ ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು.