ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಾಸ್ಕ್ ಇಲ್ಲದೇ ಗಾಂಧಿ ಬಜಾರಿಗೆ ಬಂದ ಗ್ರಾಹಕರು ಮತ್ತು ಅಂಗಡಿ ಮಾಲೀಕರಿಗೆ ದಂಡ ವಿಧಿಸುವ ಮೂಲಕ ಮಹಾನಗರ ಪಾಲಿಕೆ ಖಡಕ್ ವಾರ್ನಿಂಗ್ ನೀಡಿದೆ.
ಕೋವಿಡ್ ಮಾರ್ಗಸೂಚಿ ಅನ್ವಯ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮಾಡುವುದು ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಸರ್ಕಾರ ಸೂಚಿಸಿದೆ. ಆದರೆ, ಗಾಂಧಿ ಬಜಾರಿನಲ್ಲಿ ಇದ್ಯಾವುದನ್ನೂ ಪಾಲಿಸದೇ ಇದ್ದುದ್ದರಿಂದ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಅವರ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಗಿದೆ. ಅಂಗಡಿ, ರಸ್ತೆಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದವರನ್ನು ತಡೆದು ದಂಡ ವಿಧಿಸಲಾಗಿದೆ.