ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಹೆಸರಿನಲ್ಲಿ ಸಾಮಾನ್ಯ ಜನರ ಮೇಲೆ ನಿರಂತರ ಅನ್ಯಾಯ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನಯ್ ರಾಜಾವತ್ ಆಪಾದಿಸಿದರು.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಮಾಧ್ಯಮಗೋಷ್ಠಿಯಲಿ ಮಾತನಾಡಿದ ಅವರು, ಜನವರಿವರೆಗೆ ದೈಹಿಕ ಅಂತರ, ಮುಖ ಗವಸು ಧರಿಸದೇ ಕೋವಿಡ್ ಮಾರ್ಗಸೂಚಿ ಅನುಸರಿಸಿಲ್ಲ ಎಂಬ ಕಾರಣದಿಂದ 12,795 ಪ್ರಕರಣ ದಾಖಲಿಸಿ 23 ಲಕ್ಷ ರೂಪಾಯಿಗೂ ಅಧಿಕ ಹಣ ಸಂಗ್ರಹಿಸಲಾಗಿದೆ ಎಂದು ಆರೋಪಿಸಿದರು.
ಇಷ್ಟೊಂದು ದೊಡ್ಡ ಪ್ರಮಾಣದ ದಂಡ ಹಾಗೂ ಪ್ರಕರಣಗಳು ದಾಖಲಿಸಿದ್ದು, ಇದರಲ್ಲಿ ಯಾವೊಬ್ಬ ರಾಜಕಾರಣಿ, ಪ್ರಭಾವಿ ವ್ಯಕ್ತಿ ಹಾಗೂ ಜನಪ್ರತಿನಿಧಿಗಳಿಲ್ಲ ಎಂದು ಟೀಕಿಸಿದರು.
ಈ ಎಲ್ಲ ಅಂಶಗಳನ್ನು ಒಳಗೊಂಡ ಪತ್ರವನ್ನು ಬರೆದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಗಮನ ಸೆಳೆಯಲಾಗುವುದು ಎಂದು ಹೇಳಿದರು.