ಸುದ್ದಿ ಕಣಜ.ಕಾಂ
ಬೆಂಗಳೂರು: ಸದನದಿಂದ ಒಂದು ವಾರ ಅಮಾನತುಗೊಳಿಸಿದ್ದಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಬಿಜೆಪಿ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಕಿಡಿಕಾರಿದ್ದಾರೆ.
ಸ್ಪೀಕರ್ ಅವರು ಬಿಜೆಪಿಯ ಕೈಗೊಂಬೆಯಾಗಿದ್ದಾರೆ. ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. ನ್ಯಾಯ ಕೇಳಿದ್ದಕ್ಕೆ ಸಸ್ಪೆಂಡ್ ಮಾಡಲಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಗೂಂಡಾಗಿರಿ ಪ್ರದರ್ಶಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | ಸದನದಲ್ಲಿ ಅಂಗಿ ಬಿಚ್ಚಿದ ಶಾಸಕ ಬಿ.ಕೆ.ಸಂಗಮೇಶ್ವರ್ ಒಂದು ವಾರ ಸಸ್ಪೆಂಡ್
ಹಾಗಾದರೆ ತಮಗಾದ ಅನ್ಯಾಯಕ್ಕೆ ನ್ಯಾಯ ಕೇಳುವುದೂ ತಪ್ಪಾ? ಇತ್ತೀಚೆಗೆ ಭದ್ರಾವತಿಯಲ್ಲಿ ನಡೆದ ಗಲಭೆ ಸಂಬಂಧಪಟ್ಟಂತೆ ನನ್ನ ಮೇಲೆ ಕೇಸ್ ಹಾಕಲಾಗಿದೆ. ಇದ್ಯಾವುದರ ಬಗ್ಗೆಯೂ ಮಾತನಾಡಬಾರದೇ ಎಂದು ಪ್ರಶ್ನಿಸಿದರು.
ಶಾಂತಿ, ಸಂತೃಪ್ತಿ, ಸಹಬಾಳ್ವೆಯಿಂದ ಇರುವ ಭದ್ರಾವತಿಯಲ್ಲಿ ಧರ್ಮದ ಹೆಸರಿನಲ್ಲಿ ಬಿಜೆಪಿ ಅಶಾಂತಿ ಹುಟ್ಟಿಸುತ್ತಿದೆ. ಧರ್ಮಗಳನ್ನು ಒಡೆಯುವ ಇಂತಹ ಕೋಮುವಾದಿ ಪಕ್ಷವನ್ನು ಅಧಿಕಾರಕ್ಕೆ ತರುವ ಮುನ್ನ ಜನ ಯೋಚಿಸಬೇಕು. ಬಿಜೆಪಿ ಅಧಿಕಾರ ಇಲ್ಲಿಗೆ ಅಂತಿಮ ಆಗಬೇಕು ಎಂದು ಹೇಳಿದರು.
ಭದ್ರಾವತಿ ಕ್ಷೇತ್ರದಲ್ಲಿ ಸೋಲಿಸುವುದಕ್ಕಾಗಿ ಧರ್ಮ ಒಡೆಯುವ ಕೆಲಸ ನಡೆದಿದೆ. ಆದರೆ, ಕ್ಷೇತ್ರದ ಜನ ನನಗೆ ಕೈಬಿಡುವುದಿಲ್ಲ. ಅವರು ನನ್ನೊಂದಿಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.a