ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಧಮ್ಕಿಗಳಿಗೆ ನಾವು ಹೆದರುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು ಸಂವಿಧಾನಬದ್ಧವಾಗಿ ಕ್ಷೇತ್ರದ ಅಭಿವೃದ್ದಿಗೆ ಕೆಲಸ ಮಾಡಬೇಕು. ಅದನ್ನು ಬಿಟ್ಟು ಗೂಂಡಾಗಿರಿ ಮಾಡಿದರೆ ನಡೆಯುವುದಿಲ್ಲ. ನಮ್ಮ ಅಭಿವೃದ್ಧಿಯನ್ನು ಕಂಡು ಅದನ್ನು ಸಹಿಸದ ಸಂಗಮೇಶ್ವರ್ ಅವರು ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ । ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
2-3 ತಿಂಗಳಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ | ಶಾಸಕ ಸಂಗಮೇಶ್ವರ್ ಸೇರಿ ಅವರ ಪಕ್ಷದ ಕಾರ್ಯಕರ್ತರು ಕಳೆದು ಎರಡು-ಮೂರು ತಿಂಗಳಿನಿಂದ ಬಿಜೆಪಿ ಮುಖಂಡರನ್ನು ಬೆದರಿಸುತ್ತಿದ್ದಾರೆ. ಪಂದ್ಯಾವಳಿಯಂದೂ ಅದನ್ನೇ ಮಾಡಿದ್ದಾರೆ. ಪಂಚ್ ಮೂಲಕ ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು.
ತಪ್ಪು ಮಾಡದವರ ಮೇಲೂ ಕೇಸ್ | ಪೊ ಲೀಸರು ತಪ್ಪು ಮಾಡದೇ ಇರುವ ಬಿಜೆಪಿ ಕಾರ್ಯಕರ್ತರ ಮೇಳೆ ಪ್ರಕರಣ ದಾಖಲಿಸದ್ದಾರೆ. ಜತೆಗೆ, ಈ ಪ್ರಕರಣ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಟಿ. ಮೇಘರಾಜ್, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಹಿರಿಯ ಮುಖಂಡ ಎಂ.ಬಿ ಭಾನುಪ್ರಕಾಶ್, ಆರ್ಯಯವೈಶ್ಯ ಅಭಿವೃದ್ದಿ ನಿಗಮ ಅಧ್ಯಕ್ಷ ಡಿ.ಎಸ್ ಅರುಣ್, ಕೆ.ವಿ.ಅಣ್ಣಪ್ಪ ಉಪಸ್ಥಿತರಿದ್ದರು.