ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ರಮೇಶ್ ಜಾರಕಿಹೊಳಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಸಿಡಿ ತಯಾರಿಸುವ ಹಾಗೂ ಭ್ರಷ್ಟಾಚಾರದ ಗ್ಯಾಂಗ್ ಎಂದು ಟಾಂಗ್ ನೀಡಿದ್ದಾರೆ.
ಕಾಂಗ್ರೆಸಿನಲ್ಲಿ ಎಷ್ಟು ಜನ ಸತ್ಯಹರಶ್ಚಂದ್ರರಿದ್ದಾರೆ? |ಹಾಗಾದರೆ, ಕಾಂಗ್ರೆಸಿನಲ್ಲಿ ಎಷ್ಟು ಜನ ಸತ್ಯಹರಿಶ್ಚಂದ್ರರಿದ್ದಾರೆ? ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೇಟಿ ಪ್ರಕರಣ ನಡೆದಿತ್ತು. ಏಕೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿಲ್ಲ ಎಂದು ಖಡಕ್ ಆಗಿ ಪ್ರಶ್ನಿಸಿದರು.
ಡಿಕೆಶಿ ದುರ್ಬಳಕೆ | ಸೀಡಿ ಲೇಡಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದುರ್ಬಳಕೆ ಮಾಡಿಕೊಂಡಿದ್ದಾರೆ. ಆಕೆಯ ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.
ಕೈ ಏಜೆಂಟರಂತೆ ಯತ್ನಾಳ್ | ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಹೇಳಿಕೆಗಳನ್ನು ಸೀರಿಯಸ್ ಆಗಿ ಪರಿಗಣಿಸಬೇಡಿ ಎಂದಿದ್ದಕ್ಕೆ ಅವರನ್ನು ಹೆಚ್ಚು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.
https://www.suddikanaja.com/2021/01/26/koo-application-developed-by-indian-got-good-response-from-users/