ಸುದ್ದಿ ಕಣಜ.ಕಾಂ
ಸಾಗರ: ಕೋವಿಡ್ ಎರಡನೇ ಅಲೆ ಹಿನ್ನೆಲೆ ನಾಟಿ ನಾಟಿ ಔಷಧ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಔಷಧ ಪಡೆಯುವುದಕ್ಕಾಗಿ ರಾಜ್ಯ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳಾ ಸೇರಿದಂತೆ ನಾನಾ ಕಡೆಗಳಿಂದ ಜನ ಆಗಮಿಸುತ್ತಾರೆ. ಆದರೆ, ಮಹಾರಾಷ್ಟ್ರದಲ್ಲಿ ಈಗಾಗಲೇ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಔಷಧ ವಿತರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಸಾಗರ ತಾಲೂಕಿನ ಆನಂದಪುರ ಬಳಿಯ ನರಸೀಪುರದಲ್ಲಿ ವಿತರಣೆ ಮಾಡಲಾಗುತ್ತಿದ್ದ ನಾಟಿ ಔಷಧವನ್ನು ನೀಡಲಾಗುತಿತ್ತು. ಆದರೆ, ಲಾಕ್ ಡೌನ್ ಬಳಿಕ ಇಲ್ಲಿನ ಶಿವಗಂಗೆಯಲ್ಲಿ ಪ್ರತಿ ಗುರುವಾರ ಮತ್ತು ಭಾನುವಾರ ಔಷಧ ನೀಡಲಾಗುತ್ತಿದೆ.