ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಮೌಲ್ಯಮಾಪನಕ್ಕೆ ಹೊಸ ವಿಧಾನವನ್ನು ಜಾರಿಗೆ ತಂದಿದೆ ಎಂದು ರಾಷ್ಟ್ರೀಯ, ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತಿನ ಹಿರಿಯ ಸಲಹೆಗಾರ ಅಮೀಯ ಕುಮಾರ್ ರಥ್ ಹೇಳಿದರು.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ನ್ಯಾಕ್ ಮೌಲ್ಯಮಾಪನ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.
ಬಹಳಷ್ಟು ಕಾಲೇಜುಗಳಿನ್ನೂ ನ್ಯಾಕ್ ವ್ಯಾಪ್ತಿಗೆ ಬಂದಿಲ್ಲ | ರಾಜ್ಯದಲ್ಲಿ ಆರು ಸಾವಿರಕ್ಕೂ ಅಧಿಕ ಪದವಿ ಕಾಲೇಜುಗಳಿವೆ. 50ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿವೆ. ಆದರೆ ಇದುವರೆಗೂ ಬಹಳಷ್ಟು ಕಾಲೇಜುಗಳು ನ್ಯಾಕ್ ವ್ಯಾಪ್ತಿಗೆ ಬಂದಿಲ್ಲ ಎಂದರು.
ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾತನಾಡಿದ ಪ್ರೊನ್ಮುಡಿ ರಾಜ್, ನ್ಯಾಕ್ ಸಲಹೆಗಾರ ಡಾ.ಗಣೇಶ್ ಹೆಗ್ಡೆ, ಐಕ್ಯೂಎಸಿ ನಿರ್ದೇಶಕ ಪ್ರೊ. ಎಚ್. ಎಸ್. ಜಯಣ್ಣ, ಅಧ್ಯಾಪಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.