ಸುದ್ದಿ ಕಣಜ.ಕಾಂ
ಶಿವಮೊಗ್ಗ: ಒಂದು ವರ್ಷ ಏಳು ತಿಂಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಕೆ.ಎಂ.ಶಾಂತರಾಜು ಅವರು ವರ್ಗಾವಣೆಗೊಂಡಿದ್ದಾರೆ. ಇವರ ಸ್ಥಾನಕ್ಕೆ ಬಿ.ಎಂ. ಲಕ್ಷ್ಮಿಪ್ರಸಾದ್ ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಿದೆ.
ಹಾಲಿ ದಕ್ಷಿಣ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಇವರು 2014ರ ಐಪಿಎಸ್ ಬ್ಯಾಚ್ ನವರು. ಯಿ.ಪಿ.ಎಸ್.ಸಿ ಪರೀಕ್ಷೆಯಲ್ಲಿ 151 ನೇ ರ್ಯಾಂಕ್ ಪಡೆದ ಇವರು ರಾಜ್ಯದ ನಾನಾ ಭಾಗಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ.
ಮೂಲತಃ ಬಿ.ಟೆಕ್ ಡಿಗ್ರಿ ಶೈಕ್ಷಣಿಕ ಅರ್ಹತೆ ಹೊಂದಿರುವ ಇವರು ಮೊದಲು ಕರ್ತವ್ಯ ನಿರ್ವಹಣೆ ಆರಂಭಿಸಿದ್ದ ಬಾಗಲಕೋಟೆಯಲ್ಲಿ ಎ.ಎಸ್.ಪಿ.ಯಾಗಿ. ಅಲ್ಲಿಂದ ಉಡುಪಿಯ ನಕ್ಸಲ್ ನಿಗ್ರಹ ಪಡೆಯಲ್ಲಿ ಎಸ್ಪಿಯಾಗು ಹಾಗೂ ದಕ್ಷಿಣ ಕನ್ನಡದ ಎಸ್.ಪಿ. ಹುದ್ದೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ ಅನುಭವವಿದೆ.
ಡಿಫರೆಂಟ್ ಮೊಹಲ್ಲಾ ಮೀಟಿಂಗ್ | 2019ರ ಆಗಸ್ಟ್ ನಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಆಗಿನ ಎಸ್.ಪಿ ಅಶ್ವಿನಿ ಅವರಿಂದ ಅಧಿಕಾರ ಸ್ವೀಕರಿಸಿದ ಅವರು ಆಯಾ ಪ್ರದೇಶಗಳಲ್ಲಿ ಮೊಹಲ್ಲಾ ಮೀಟಿಂಗ್ ಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲು ಒತ್ತು ನೀಡಿದ್ದರು. ಈ ಮೂಲಕ ಕೋಮು ಸೌಹಾರ್ದತೆಗೆ ಯತ್ನಿಸಿದರು. ಶಾಂತರಾಜು ಅವರನ್ನು ಬೆಂಗಳೂರು ನಗರ ಟ್ರಾಫಿಕ್ ಪೂರ್ವ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.