ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯ ಅವಧಿ ಮುಗಿದಿರುವ ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 29ರಂದು ನಡೆಸಲು ಉದ್ದೇಶಿಸಲಾಗಿದೆ.
READ | ಕೆ.ಎಸ್.ಆರ್.ಟಿ.ಸಿ. ಬಸ್ ಮುಷ್ಕರ ಹಿನ್ನೆಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮತ್ತೊಂದು ರೈಲು ಸಂಚಾರ
ವೇಳಾಪಟ್ಟಿ | ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏಪ್ರಿಲ್ 15ರಂದು, ನಾಮಪತ್ರ ಪರಿಶೀಲನೆ ಏ.16, ಉಮೇದುವಾರಿಕೆ ಹಿಂಪಡೆಯಲು ಕೊನೆ ದಿನ ಏ.19 ಆಗಿರುತ್ತದೆ. ಏಪ್ರಿಲ್ 27ರಂದು ಬೆಳಗ್ಗೆ 7 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ. ಏ.30ರಂದು ಬೆಳಗ್ಗೆ 8ರಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಏ.30ರಂದು ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.