ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕಾನು ಅರಣ್ಯ ಖಾಸಗಿ ಪಾಲಾಗುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಸೂಚನೆ ನೀಡಿದರು.
ಸಾಗರ ತಾಲೂಕಿನ ಯಡೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ಗ್ರಾಮ ಪಂಚಾಯಿತಿ ಜೀವ ವೈವಿಧ್ಯ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜೈವಿಕ ಕಾನು | 150 ಎಕ್ರೆ ಪ್ರದೇಶದಲ್ಲಿ ಬಹು ಅಪರೂಪದ ಭಾರಿ ಗಾತ್ರದ 15 ಸಾವಿರ ಮರಗಳು ಈ ಪ್ರದೇಶದಲ್ಲಿ ಇವೆ. ಇವು ಪಾರಂಪರಿಕ ವೃಕ್ಷಗಳಾಗಿದ್ದು, ಇವುಗಳನ್ನು ಪಾರಂಪರಿಕ ಜೈವಿಕ ಕಾನು ಎಂದು ಗುರುತಿಸಲಾಯಿತು ಎಂದು ಅಶೀಸರ ತಿಳಿಸಿದರು.
ಬಳಿಕ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಗ್ರಾಮ ಪಂಚಾಯತ್ ಜೀವವೈವಿಧ್ಯ ಮಂಡಳಿ ಸಮಿತಿ ಸಭೆಯಲ್ಲಿ ಸಹ ಗ್ರಾಮಸ್ಥರು ಗ್ರಾಮದ ಕೆರೆ, ಹಳ್ಳ, ಅರಣ್ಯ ಪ್ರದೇಶ, ಗೋಮಾಳ ಒಟ್ಟು 74 ಎಕರೆ ಜಾಗವನ್ನು ಖಾಸಗಿಯವರು ಕಬಳಿಕೆ ಮಾಡದಂತೆ ತಡೆಯಬೇಕು ಎಂದು ಮನವಿ ಮಾಡಿದರು.
https://www.suddikanaja.com/2021/01/07/karnataka-biodiversity-board-chairman-meet-cm-yadiyurappa/