ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುವುದು. ಹೀಗಾಗಿ, ಹೆಸರು ನೋಂದಣಿ ಮಾಡದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದ್ದಾರೆ.
READ | ಕೊರೊನಾ ಸರಣಿ ಸಾವು, ಮೃತರ ಸಂಖ್ಯೆ ಎಷ್ಟು, ಸೋಂಕಿತರ ತಾಲೂಕುವಾರು ಮಾಹಿತಿ ಇಲ್ಲಿದೆ
ರೆಮಿಡಿಸಿವಿರ್ ಇಂಜೆಕ್ಷನ್ ಉಚಿತ | ಆಯುಷ್ಮಾನ್ ಯೋಜನೆಯಡಿ ರೆಫರಲ್ ಮೂಲಕ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮಿಡಿಸಿವಿರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ.
ಖಾಸಗಿ ಆಸ್ಪತ್ರೆ ದರ | ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಸರ್ಕಾರ ನಿಗದಿಪಡಿಸಿರುವ ಈ ಕೆಳಕಂಡ ಮೊತ್ತವನ್ನು ರೋಗಿಗಳೇ ನೇರವಾಗಿ ಭರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
READ | ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿದ್ದಕ್ಕೆ 49 ಬೈಕ್ ಸೀಜ್, ವಿಧಿಸಲಾದ ದಂಡವೆಷ್ಟು ಗೊತ್ತಾ?
ಜನರಲ್ ವಾರ್ಡ್ 10 ಸಾವಿರ ರೂಪಾಯಿ, ಎಚ್.ಡಿ.ಯು 12 ಸಾವಿರ ರೂ., ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ 15 ಸಾವಿರ ರೂ, ವಿದ್ ವೆಂಟಿಲೇಟರ್ 25 ಸಾವಿರ ರೂ. ದರಗಳ ಮಿತಿ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ದಾಖಲಿಸಿಕೊಳ್ಳಲು ನಿರಾಕರಿಸಿದರೆ ಕರೆ ಮಾಡಿ | ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರ ವಿಧಿಸಿದರೆ 1800 425 8330 ಗೆ ಹಾಗೂ 1912 ಕರೆ ಮಾಡಿ ದೂರು ನೀಡಬಹುದು. ಅಥವಾ sastgrievance@gmail.com ಗೆ ಇ-ಮೇಲೆ ಮೂಲಕ ದೂರು ಸಲ್ಲಿಸಬಹುದು. 080-22536200 ಗೆ ಕರೆ ಮಾಡಬಹುದು.
https://www.suddikanaja.com/2021/04/19/50-percent-bed-reserve-for-covid-in-private-hospitals/