ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯ ಪಡೆ (ಟಾಸ್ಕ್ ಫೋರ್ಸ್) ಕೊರೊನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
READ | ಖಾಸಗಿ ಬಸ್ ನಿಲ್ದಾಣದಲ್ಲಿ ರಾತ್ರೋರಾತ್ರಿ ಮಳಿಗೆ ನಿರ್ಮಾಣ, ಕಿತ್ತೊಗೆದ ಪಾಲಿಕೆ, ಒತ್ತುವರಿದಾರರ ಮೇಲೆ ಬೀಳಲಿದೆ ಕೇಸ್
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದ ಈ ಕಾರ್ಯ ಪಡೆಯಲ್ಲಿ ಪಿಡಿಒ ಸದಸ್ಯ ಕಾರ್ಯದರ್ಶಿಯಾಗಿದ್ದು, ಪೊಲೀಸ್ ಇಲಾಖೆ, ಶಿಕ್ಷಣ, ಕಂದಾಯ, ಆರೋಗ್ಯ ಇಲಾಖೆ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಮತ್ತು ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು ಇದ್ದಾರೆ ಎಂದರು.
ಹೆಲ್ಪ್ ಡೆಸ್ಕ್ ಗಳೀಗ ಸಮುದಾಯ ಸಹಾಯವಾಣಿ | ಹೋಮ್ ಕ್ವಾರೆಂಟೈನ್ ಬಗ್ಗೆ ನಿಗಾ ವಹಿಸಲು ರಚಿಸಲಾಗಿದ್ದ ಗ್ರಾಮ ಪಂಚಾಯಿತಿ ಹೆಲ್ಪ್ ಡೆಸ್ಕ್ ಗಳು ಇನ್ನು ಮುಂದೆ ಸಮುದಾಯ ಸಹಾಯವಾಣಿಗಳಾಗಿ ಕಾರ್ಯ ನಿರ್ವಹಿಸಲಿವೆ ಎಂದು ಮಾಹಿತಿ ನೀಡಿದರು.
READ | ಈ ಪಡಿತರ ಚೀಟಿ ನಿಮ್ಮಲ್ಲಿದ್ದರೆ ತಕ್ಷಣ ಬದಲಾಯಿಸಿ, ಕಾರಣವೇನು ಗೊತ್ತಾ?
ಗ್ರಾಮಾಂತರ ಪ್ರದೇಶಗಳಿಗೆ ಹಿಂದಿಗಿರುವ ವಲಸೆ ಕಾರ್ಮಿಕರಿಗೆ ಮತ್ತಿತರರಿಗೆ ನರೇಗಾ ಅಡಿಯಲ್ಲಿ ಉದ್ಯೋಗ ಒದಗಿಸುವುದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ತಡೆಗಟ್ಟಲು ಕಾರ್ಯನಿರ್ವಹಿಸುವ ಸ್ವಯಂ ಸೇವಕರನ್ನು ಗುರುತಿಸಿ, ಪಾಳಿ ವ್ಯವಸ್ಥೆಯಲ್ಲಿ ಅವರ ಸೇವೆ ಪಡೆಯುವುದು, ಸಮುದಾಯ ಸಹಾಯವಾಣಿ ಆರಂಭಿಸುವುದು, ಅವಶ್ಯ ಮಾಸ್ಕ್, ಸಾಬೂನು ಮತ್ತು ಸ್ಯಾನಿಟೈಸರ್, ಸ್ವಚ್ಛತಾ ಪರಿಕರಗಳನ್ನು ಖರೀದಿಸಲು ಗ್ರಾಮ ಪಂಚಾಯತ್ಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಬಾಕಿ ಅನುದಾನ ಮಂಜೂರು | ನರೇಗಾ ಯೋಜನೆಯಡಿ ಕಳೆದ ಸಾಲಿನಲ್ಲಿ ಬಾಕಿ ಇದ್ದ 89 ಕೋಟಿ ರೂಪಾಯಿ ಮತ್ತು ಪ್ರಸ್ತುತ ಸಾಲಿನ 284 ಕೋಟಿ ರೂಪಾಯಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ 77 ಕೋಟಿ ರೂಪಾಯಿ ಕೂಲಿ ಮೊತ್ತವನ್ನು ಫಲಾನುಭವಿಗಳಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
https://www.suddikanaja.com/2020/11/26/protest-for-siganduru-temple/