ಸುದ್ದಿ ಕಣಜ.ಕಾಂ
ಬೆಂಗಳೂರು: ಕೋವಿಡ್ ಮಾರ್ಗಸೂಚಿಗಳನ್ನು ಇನ್ನಷ್ಟು ಟೈಟ್ ಮಾಡಿರುವ ರಾಜ್ಯ ಸರ್ಕಾರ ಏಪ್ರಿಲ್ 28ರ ಬಳಿಕ ರಾಜ್ಯದಾದ್ಯಂತ ಲಾಕ್ ಡೌನ್ ಗೆ ಮುಂದಾಗಿದೆ.
ಏಪ್ರಿಲ್ 28ರಿಂದ ಹೊಸ ಮಾರ್ಗಸೂಚಿ ಅನ್ವಯವಾಗಲಿದೆ. ಏಪ್ರಿಲ್ 27ರ ರಾತ್ರಿಯಿಂದಲೇ ಹೊಸ ನಿಯಮ ಜಾರಿಗೆ ಬರಲಿವೆ. ಅದರಂತೆ, ಬುಧವಾರದಿಂದ ಪ್ರತಿದಿನ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಕಾಲಾವಕಾಶ ನೀಡಲಾಗಿದೆ. ಆ ವೇಳೆ, ಬರೀ ಹಾಲು, ತರಕಾರಿ, ದಿನಸಿ ಅಂಗಡಿಗಳನ್ನು ಮಾತ್ರ ತೆರೆಯಬಹುದು. ಹತ್ತು ಗಂಟೆಯ ನಂತರ ಎಲ್ಲ ಅಂಗಡಿಗಳು ಬಂದ್ ಆಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಸೋಮವಾರ ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಈ ಸಂಬಂಧ ಆಯಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಏನಿರುತ್ತೆ– ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ, ಆಸ್ಪತ್ರೆ, ಮೆಡಿಕಲ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಅವಕಾಶ, ಕೃಷಿ ಚಟುವಟಿಕೆ, ಕಟ್ಟಡ ಕಾಮಗಾರಿ, ಉತ್ಪಾದನಾ ವಲಯದ ಕಾರ್ಖಾನೆ, ಗೂಡ್ಸ್ ವಾಹನ, ಅಗತ್ಯ ವಸ್ತುಗಳು ಅಬಾಧಿತ.
ಏನಿರಲ್ಲ– ಕೆ.ಎಸ್.ಆರ್.ಟಿ.ಸಿ ಬಸ್, ಹತ್ತು ಗಂಟೆ ಬಳಿಕ ವಾಹನ ಸಂಚಾರ ಬಂದ್, ಗಾರ್ಮೆಂಟ್ಸ್ ಇತ್ಯಾದಿ.
https://www.suddikanaja.com/2020/11/11/bike-stealing-gang-arrested-in-tunga-nagar-ps/