ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಎರಡನೇ ದಿನಕ್ಕೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬಿಡುವಿನ ಅವಧಿಯಲ್ಲಿ ಜನಸಂಚಾರ ಜೋರಾಗಿತ್ತು. ಆದರೆ, 10 ಗಂಟೆಯ ಬಳಿಕ ನಗರ ಸ್ತಬ್ಧವಾಗಿದೆ.
ಅಮೀರ್ ಅಹ್ಮದ್ ವೃತ್ತ, ಗೋಪಿ ಸರ್ಕಲ್, ಕೋರ್ಟ್ ಸರ್ಕಲ್, ಅಶೋಕ ವೃತ್ತ, ಸಕ್ರ್ಯೂಟ್ ಹೌಸ್ ವೃತ್ತದಲ್ಲಿ ಪೊಲೀಸರ ಗಸ್ತು ಇದೆ. ಪ್ರಮುಖ ವೃತ್ತಗಳಲ್ಲಿ ಬ್ಯಾರಿಕೆಡ್ ಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರ ಓಡಾಟದ ಮೇಲೆ ಪೊಲೀಸರ ಹದ್ದಿನ ಕಣ್ಣಿಡಲಾಗಿದೆ.
ಅಮೀರ್ ಅಹ್ಮದ್ ವೃತ್ತ ಸೇರಿದಂತೆ ಹಲವೆಡೆ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡರು. ಪೊಲೀಸ್ ಅಧಿಕಾರಿಗಳು ನಗರ ಸಂಚಾರದಲ್ಲಿದ್ದು, ವೀಕೆಂಡ್ ಕರ್ಫ್ಯೂ ಮೇಲೆ ಕಣ್ಣಿಟ್ಟಿದ್ದಾರೆ.