ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಿದ್ಯಾನಗರದ ಕೆಂಚಪ್ಪ ಎಂಬುವವರ ಮನೆಯಲ್ಲಿ ಇತ್ತೀಚೆಗೆ ಚಿನ್ನಾಭರಣ, ನಗದು ಕಳವು ಮಾಡಿ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭದ್ರಾವತಿಯ ಭೋವಿ ಕಾಲೊನಿ ನಿವಾಸಿ ವಸಂತ್ ರಾಜು (35) ಬಂಧಿತ ಆರೋಪಿ. ಈತನಿಂದ 18.92 ಗ್ರಾಂ ಬಂಗಾರದ ಆಭರಣಗಳು ಮತ್ತು 2.12 ಲಕ್ಷ ರೂಪಾಯಿ ನಗದು, 1 ಮೊಬೈಲ್, ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಕೆಂಚಪ್ಪ ಅವರ ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ 18 ಗ್ರಾಂ ಬಂಗಾರದ ಆಭರಣಗಳು ಮತ್ತು 2.30 ಲಕ್ಷ ನಗದು ಕಳವು ಮಾಡಲಾಗಿತ್ತು.
ಆರೋಪಿಯ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಕಲಂ 454, 380 ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.