ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳನ್ನು ಬೆಳಗ್ಗೆ 6ರಿಂದ ಸಂಜೆ 8 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಈ ಸಂಬಂಧ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
ಏಪ್ರಿಲ್ 30ರಿಂದ ಅನ್ವಯವಾಗುವಂತೆಯೇ ರಾಜ್ಯದಲ್ಲಿರುವ ಎಲ್ಲ ನಂದಿನಿ ಮಳಿಗೆಗಳಿಗೆ ಸಂಜೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಕೋವಿಡ್ ಸೋಂಕು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ವಿಧಿಸಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಕಾಲಾವಕಾಶ ನೀಡಲಾಗಿದೆ. ಇದರಲ್ಲಿ ನಂದಿನಿ ಹಾಲು ಕೂಡ ಒಂದು. ಆದರೆ, ಈ ಕಾಲಾವಧಿಯಲ್ಲಿ ಹಾಲು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಈ ಅಂಶವನ್ನು ಮನಗಂಡು ಪರಿಷ್ಕøತ ಆದೇಶವನ್ನು ಹೊರಡಿಸಲಾಗಿದೆ.