ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನ ಸಿದ್ದರಾಮಯ್ಯ ಅವರನ್ನು ತಿರಸ್ಕರಿಸಿದ್ದಾರೆ. ತುರ್ತಾಗಿ ಸಿಎಂ ಆಗಬೇಕೆಂಬ ಅವರ ಕನಸು ಈಡೇರುವುದಿಲ್ಲ. ಹೀಗಾಗಿ, ಭ್ರಮೆಯಿಂದ ಹೊರಗೆ ಬರಬೇಕು ಎಂದು ಹೇಳಿದರು.
ವ್ಯತ್ಯಾಸ ಸರಿಪಡಿಸಲಾಗುವುದು | ಆಡಳಿತಾತ್ಮಕ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಸಣ್ಣಪುಟ್ಟ ವ್ಯತ್ಯಾಸಗಳಾಗಿವೆ. ಅವುಗಳನ್ನು ತುರ್ತಾಗಿ ಸರಿಪಡಿಸಲಾಗುವುದು. ನನ್ನ ಇಲಾಖೆಯಲ್ಲಿ ಗಮನಿಸಿದ್ದರಿಂದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಪಕ್ಷದ ನಾಯಕರ ಗಮನಕ್ಕೆ ತಂದಿದ್ದೇನೆ. ಪಕ್ಷದ ವರಿಷ್ಠರು ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.