ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಶೆಟ್ಟಿಹಳ್ಳಿ, ಹೊಳೆಬೆನವಳ್ಳಿ, ಕೊನಗವಳ್ಳಿ, ಕುಂಚೇನಹಳ್ಳಿ, ಅಬ್ಬಲಗೆರೆ, ಕೊಮ್ಮನಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ತಾಂಡಾಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ತಾತ್ಕಾಲಿಕವಾಗಿ ‘ತಾಂಡಾ ರೋಜ್ ಗಾರ್ ಮಿತ್ರ’ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
READ | ವಾರಾಂತ್ಯ ಲಾಕ್ ಡೌನ್ ಹಿನ್ನೆಲೆ ಕೆ.ಪಿ.ಎಸ್.ಸಿ ಇಲಾಖಾ ಪರೀಕ್ಷೆ ಮುಂದೂಡಿಕೆ
ತಾಂಡಾಗಳಲ್ಲಿನ ಪ್ರತಿ 250-300 ಮನೆಗಳಿಗೆ ಒಬ್ಬರಂತೆ ತಾಂಡಾ ರೋಜ್ಗಾರ್ ಮಿತ್ರರನ್ನು ಆಯ್ಕೆ ಮಾಡಲಾಗುವುದು.
ಏಪ್ರಿಲ್ 23 ಕೊನೆ ದಿನ | ಎಸ್.ಎಸ್.ಎಲ್.ಸಿ ಪಾಸಾಗಿರುವ 45 ವರ್ಷ ವಯೋಮಿತಿಯೊಳಗಿನ ತಾಂಡಾ ನಿವಾಸಿಗಳು, ಮಹಿಳೆಯರಿಗೆ ಹಾಗೂ ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಅರ್ಜಿಯನ್ನು ಪಡೆದು, ಏಪ್ರಿಲ್ 23 ರೊಳಗಾಗಿ ಸಲ್ಲಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ತಾಲೂಕು ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.