ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್) ಸಭಾಂಗಣದಲ್ಲಿ ಸೋಮವಾರ ನಡೆದ ಮಹತ್ವದ ಸಭೆಗೆ ಗೈರು ಹಾಜರಾದ ವೈದ್ಯರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
READ | ಕೋವಿಡ್ ಪಾಸಿಟಿವ್ ಇದ್ಯಾ? ಭಯ ಬೇಡ, ಶಿವಮೊಗ್ಗದಲ್ಲಿ ಆರಂಭವಾಗಲಿದೆ ‘ಟೆಲಿಮೆಡಿಸಿನ್ ಕೇಂದ್ರ’, ಏನಿದರ ಪ್ರಯೋಜನ
ಮುಂದಿನ ದಿನಗಳಲ್ಲಿ ಇದೇ ರೀತಿ ಸಭೆಗೆ ಗೈರು ಹಾಜರಾಗುವುದು ಅಥವಾ ಕರ್ತವ್ಯಲೋಪ ಕಂಡುಬಂದರೆ ಸಂಬಂಧಪಟ್ಟವರ ಮೇಲೆ ನಿಯಮ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಾಳಿ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ಡಿ ಗ್ರೂಪ್, ನರ್ಸ್ ಮತ್ತು ಇತರೆ ವಿಭಾಗಗಳ ಸಿಬ್ಬಂದಿ ಹಾಜರಾತಿಯನ್ನು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು. ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
READ | ಮೂರೂವರೆ ಸಾವಿರ ಗಡಿ ದಾಟಿದ ಕೊರೊನಾ ಆ್ಯಕ್ಟಿವ್ ಕೇಸ್, ಶಿವಮೊಗ್ಗ, ಸಾಗರದಲ್ಲಿ ಕೊರೊನಾ ಕೇಕೆ
ಜಿಲ್ಲೆಯಲ್ಲಿ ನಿಯಂತ್ರಣ ಮೀರಿ ಕೊರೊನಾ ಸೋಂಕು ಹರಡುತ್ತಿದೆ. ನಿಯಂತ್ರಣಕ್ಕೆ ಎಲ್ಲರೂ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೀಗಿರುವಾಗ, ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ತನೆ ಸಹಿಸಲಾಗದು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಎಸ್. ರುದ್ರೇಗೌಡ, ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್, ಸಿಮ್ಸ್ ನಿರ್ದೇಶಕ ಡಾ. ಎಸ್.ಒ.ಸಿದ್ಧಪ್ಪ, ಡಿ.ಎಚ್.ಒ ಡಾ. ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಸರ್ಜನ್ ಡಾ.ಶ್ರೀನಿವಾಸ್ ಉಪಸ್ಥಿತರಿದ್ದರು.