ಸುದ್ದಿ ಕಣಜ.ಕಾಂ
ಸಾಗರ: ಕೊರೊನಾ ಅಟ್ಟಹಾದ ನಡುವೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ.
ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಮತ್ತಾಲಬೈಲು ಗ್ರಾಮದ 18 ವರ್ಷದ ಯುವಕನಿಗೆ ಮಂಗನ ಕಾಯಿಲೆ ಪಾಸಿಟಿವ್ ಇರುವುದು ದೃಢಪಟ್ಟಿದೆ.
READ | ಲಾಕ್ ಡೌನ್ ರೂಲ್ಸ್ ಬ್ರೇಕ್ ಮಾಡಿದ 16 ಅಂಗಡಿ, 77 ವಾಹನ ಮಾಲೀಕರ ಮೇಲೆ ಬಿತ್ತು ಕೇಸ್, ತಾಲೂಕುವಾರು ಮಾಹಿತಿ ಇಲ್ಲಿದೆ
ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿತ್ತಿದ್ದ ಯುವಕ ಲಾಕ್ ಡೌನ್ ಹಿನ್ನೆಲೆ ಊರಿಗೆ ಬಂದಿದ್ದ. ಆ ವೇಳೆ, ಈತನಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಿದಾಗ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ.
ಯುವಕನಿಗೆ ಚಿಕಿತ್ಸೆ ನೀಡಲಾಗುತಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ.
ಇನ್ನಷ್ಟು ರಕ್ತದ ಮಾದರಿ ಸಂಗ್ರಹ | ಸಾಗರ ತಾಲೂಕಿನಲ್ಲಿ ಇದುವರೆಗೆ ಒಟ್ಟು 1,548 ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದು, ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.