ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬೈಕ್ ಸವಾರನಿಗೆ ತಡೆದು ದರೋಡೆ ಮಾಡಿದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
https://www.suddikanaja.com/2021/03/30/accused-arrested-in-shiralakoppa/
ಮೇ 4ರಂದು ಬೆಳಗಿನ ಜಾವ ನಗರದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್ ನಲ್ಲಿ ಸುನೀಲ್ ಎಂಬುವವರಿಗೆ ತಡೆದು ಹೆದರಿಸಿ 500 ರೂಪಾಯಿ ನಗದು, ಮೊಬೈಲ್ ಫೋನ್ ಹಾಗೂ ಎಟಿಎಂ ಕಾರ್ಡ್ ಕಿತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.
ಈ ಕುರಿತು ಸುನೀಲ್ ಅವರು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು, ಇವರ ವಿರುದ್ಧ ಪತ್ತೆಯಾಯ್ತು ಇನ್ನಷ್ಟು ಪ್ರಕರಣ | ಟಿಪ್ಪುನಗರ ನಿವಾಸಿಗಳಾದ ಮಹಮದ್ ನೂರುಲ್ಲಾ(19), ಸೈಯ್ಯದ್ ಅಹಮದ್(19), ತುಂಗಾನಗರ ನಿವಾಸಿ ಮಹಮದ್ ತಬರಕ್(19) ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ 19.200 ಗ್ರಾಂ ಚಿನ್ನದ ಚೈನ್, ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ ಚಾಕು ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ಕೈಗೊಂಡಾಗ ಆರೋಪಿಗಳು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ 1 ಹಾಗೂ ವಿನೋಬನಗರ ಪೊಲೀಸ್ ಠಾಣೆಯ 2 ಪ್ರಕರಣಗಳು ಸೇರಿ ಒಟ್ಟು 3 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ.
https://www.suddikanaja.com/2020/11/05/robering-showing-duplicate-gold/