ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬಿಗ್ ಬಾಸ್ ರಿಯಾಲಿಟಿ ಶೋ, ಅದರಲ್ಲೂ ಕಿಚ್ಚ ಸುದೀಪ್ ಅವರ ಕಂಚಿನ ಕಂಠ ಕೇಳುವುದೇ ಒಂದು ಖುಷಿ. ಇದರೊಂದಿಗೆ, ಬಿಗ್ ಬಾಸ್ ಮನೆಯಿಂದ ಯಾರು ಹೊರಗಡೆ ಬರುತ್ತಾರೆ, ಫೈನಲಿ ಯಾರು ಗೆಲ್ಲಬಹುದು….
READ | ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಭದ್ರಾವತಿ ಹುಡುಗಿ!
ಪರಮೇಶ್ವರ್ ಹೇಳಿದ್ದೇನು?
‘ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲ ಖುಷಿಯಾಗಿದ್ದಾರೆ. ಐಸೋಲೇಷನ್ ನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಆನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ.
READ | ‘ಪಾರು’ ಧಾರಾವಾಹಿಯಿಂದ ಮಾನ್ಸಿ ಜೋಶಿ ಎಕ್ಸಿಟ್, ಜರ್ನಿಯ ಅನುಭವ ಇಲ್ಲಿ ಹಂಚಿಕೊಂಡಿದ್ದಾರೆ…
READ | ಮಲೆನಾಡಿನ ಬೆಡಗಿ ಬೆಳ್ಳಿತೆರೆಯಲ್ಲಿ ಹವಾ
ಬಿಗ್ ಬಾಸ್ ಮನೆಯಲ್ಲಿ ಯಾರ್ಯಾರಿದ್ದರು | ಪ್ರಸಕ್ತ ಬಿಗ್ ಬಾಸ್ ಮನೆಯಲ್ಲಿ ಅರವಿಂದ್, ಮಂಜು ಪಾವಗಡ, ನಿಧಿ ಸುಬ್ಬಯ್ಯ, ಪ್ರಶಾಂತ್ ಸಂಬರಗಿ, ಚಂದ್ರಚೂಡ್, ಶಮಂತ್, ಶುಭಾ ಪುಂಜಾ, ವೈಷ್ಣವಿ, ಪ್ರಿಯಾಂಕಾ, ರಘು ಗೌಡ ಇದ್ದರು. ಇವರಲ್ಲಿ ಯಾರು ಗ್ರ್ಯಾಂಡ್ ಫಿನಾಲೆವರೆಗೆ ಇರಲಿದ್ದಾರೆ ಎಂಬ ಕೌತುಕಕ್ಕೆ ಬ್ರೇಕ್ ಬಿದ್ದಿದೆ.