ಸುದ್ದಿ ಕಣಜ.ಕಾಂ
ಶಿರಾಳಕೊಪ್ಪ: ತಂಡಗುಂದ ಗ್ರಾಮದ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣ ಕಳವು ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
https://www.suddikanaja.com/2020/11/11/bike-stealing-gang-arrested-in-tunga-nagar-ps/
ಜೋಸ್ಟೀನ್ ದಂಡೀನ್ ಎಂಬುವವರ ಮನೆಯ ಹೆಂಚನ್ನು ತೆಗೆದು, ಮನೆಯಲ್ಲಿದ್ದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ನೀಡಿದ ದೂರಿನ ಮೇರೆಗೆ ಕಲಂ 454, 380 ಐಪಿಸಿ ಅಡಿ ಪ್ರಕರಣ ದಾಖಲಿಸಲಾಗಿತ್ತು.
ತನಿಖೆ ಕೈಗೊಂಡ ಪೊಲೀಸರು ಬುಧವಾರ ಶಿಕಾರಿಪುರ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಶಿಕಾರಿಪುರ ವೃತ್ತ ಸಿಪಿಐ, ಶಿರಾಳಕೊಪ್ಪ ಪಿಎಸ್ಐ ಹಾಗೂ ಸಿಬ್ಬಂದಿಯ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಬಂಧಿತರು | ತರೀಕೆರೆಯ ಶಿವನಿ ಗ್ರಾಮದ ಸ್ವಾಮಿ ಅಲಿಯಾಸ್ ನವೀನ್ (27), ಹಾವೇರಿಯ ಬ್ಯಾಡಗಿ ಟೌನ್ ನಿವಾಸಿ ಯಲ್ಲಪ್ಪ (28) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 10 ಲಕ್ಷ ರೂಪಾಯಿ ಮೌಲ್ಯದ 220 ಗ್ರಾಂ ಬಂಗಾರ ಆಭರಣ ಮತ್ತು 100 ಗ್ರಾಂ ಬೆಳ್ಳಿಯ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ 60,000 ರೂಪಾಯಿ ಮೌಲ್ಯದ ದ್ವಿ ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರ ವಿರುದ್ಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ 2 ಹಗಲು ಮನೆ ಗಳ್ಳತನ ಪ್ರಕರಣ ಕೂಡ ದಾಖಲಾಗಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ.
https://www.suddikanaja.com/2020/11/05/robering-showing-duplicate-gold/