ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಾಯುಭಾರ ಕುಸಿತದಿಂದಾಗಿ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಿಸಿಲಾಗಿದೆ.
READ | ಶಿವಮೊಗ್ಗದಲ್ಲಿ ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ, ಡಿಸಿ ಖಡಕ್ ವಾರ್ನಿಂಗ್
ಶಿವಮೊಗ್ಗ ನಗರದಲ್ಲೂ ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುವ ಸಾಧ್ಯತೆ ಇದೆ. ಹೀಗಾಗಿ, ಮಹಾನಗರ ಪಾಲಿಕೆಯಿಂದ ಜನರ ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ. ಇದು ದಿನದ 24 ಗಂಟೆ ಕಾರ್ಯನಿರ್ವಹಣೆ ಮಾಡಲಿದೆ. ಹೀಗಾಗಿ, ಮಳೆಯಿಂದ ಯಾವುದರೂ ಸಮಸ್ಯೆಯಾದರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡುವಂತೆ ಕೋರಲಾಗಿದೆ.
ಸಹಾಯವಾಣಿ ಸಂಖ್ಯೆ 1800 4257677ಗೆ ಕರೆ ಮಾಡುವಂತೆ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ತಿಳಿಸಿದ್ದಾರೆ.