ಸುದ್ದಿ ಕಣಜ.ಕಾಂ
ಬೆಂಗಳೂರು: ಕೋವಿಡ್ ಹಿನ್ನೆಲೆ ರಾಜ್ಯದಾದ್ಯಂತ ವಿಧಿಸಲಾಗಿರುವ ಕಠಿಣ ಕ್ರಮಗಳಿಂದಾಗಿ ಜನಸಾಮಾನ್ಯರಿಗೆ ಭಾರಿ ತೊಂದರೆ ಆಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸಪೋರ್ಟ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
READ | ಪವರ್ ಮೆನ್, ಶಿಕ್ಷಕರು, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ಸ್ ಫ್ರಂಟ್ ಲೈನ್ ವರ್ಕರ್ಸ್
ಎರಡನೇ ಅಲೆಯ ಸೋಂಕು ತೀವ್ರವಾಗಿ ಹರಡುತ್ತಿರುವುದನ್ನು ತಡೆಯುವ ಉದ್ದೇಶದಿಂದ ಕಠಿಣ ಕ್ರಮ ಜಾರಿಗೆ ತರಲಾಗಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮೇ 24ರ ವರೆಗೆ ವಾಣಿಜ್ಯ ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ನಿರ್ಬಂಧ ಹೇರುವುದು ಅನಿವಾರ್ಯವಾಗಿತ್ತು ಎಂದು ಸಿಎಂ ತಿಳಿಸಿದ್ದಾರೆ.
ಪ್ಯಾಕೇಜ್ನಲ್ಲಿ ನೀಡಿದ್ದೇನು?
- ಹೂವು ಬೆಳೆಗಾರರಿಗೆ ಪ್ರತಿ ಹೆಕ್ಟೆರ್ ಹೂವು ಹಾನಿಗೆ 10 ಸಾವಿರ ರೂಪಾಯಿ ಸಹಾಯ. ಇದರಿಂದ ರಾಜ್ಯದ 20 ಸಾವಿರ ರೈತರಿಗೆ ಅನುಕೂಲವಾಗಿದ್ದು, ಇದಕ್ಕಾಗಿ ಒಟ್ಟು 12.73 ಕೋಟಿ ರೂಪಾಯಿ ನೀಡಲಾಗಿದೆ.
- ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಉಂಟಾಗಿರುವ ನಷ್ಟಕ್ಕೆ ಗರಿಷ್ಠ 1 ಹೆಕ್ಟೆರ್ ಗೆ 10 ಸಾವಿರ ರೂಪಾಯಿ ಸಹಾಯ. ಒಟ್ಟು 69 ಕೋಟಿ ರೂಪಾಯಿ ತಗುಲಲಿದ್ದು, 69 ಸಾವಿರ ರೈತರಿಗೆ ಪ್ರಯೋಜನ.
- ಲೈಸೆನ್ಸ್ ಉಳ್ಳ, ನೋಂದಾಯಿತ ಆಟೊ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ 3 ಸಾವಿರ ರೂ.
- ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ.
- ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ. ನೀಡಲಾಗುವುದು. ಇದರಿಂದ, ಕ್ಷೌರಿಕರು, ಅಗಸರು, ಟೈಲರ್ ಗಳು, ಹಮಾಲಿಗಳು, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್ ಗಳು, ಕಮ್ಮಾರರು, ಗೃಹ ಕಾರ್ಮಿಕರು, ಚಮ್ಮಾರರಿಗೆ ಪ್ರಯೋಜನವಾಗಲಿದೆ.
- ರಸ್ತೆ ಬದಿಯ ವ್ಯಾಪಾರಿಗಳಿಗೆ ಆತ್ಮ ನಿರ್ಭರ್ ಯೋಜನೆ ಅಡಿ ನೋಂದಣಿ ಮಾಡಿಸಿಕೊಂಡಿರುವವರಿಗೆ ತಲಾ 2 ಸಾವಿರ ರೂ.
https://www.suddikanaja.com/2021/05/09/covid-vaccine-to-above-18/
- ಕಲಾವಿದರು, ಕಲಾ ತಂಡಗಳಿಗೆ ತಲಾ 3 ಸಾವಿರ ರೂ.
- ರೈತರು, ಸ್ವ ಸಹಾಯ ಸಂಘಗಳು ಮತ್ತು ಭೂ ಅಭಿವೃದ್ಧಿ ಬ್ಯಾಂಕುಗಳಿಂದ ಪಡೆದ ಸಣ್ಣ, ಮಧ್ಯಮ ಮತ್ತು ಧೀರ್ಘಾವಧಿಯ ಸಾಲಗಳ ಮರುಪಾವತಿ ದಿನಾಂಕವನ್ನು 2020ರ ಮೇ 1ರಿಂದ ಮರುಪಾವತಿಸಬೇಕಾದ ಕಂತುಗಳನ್ನು 2021ರ ಜುಲೈ 31ರ ವರೆಗೆ ವಿಸ್ತರಿಸಲಾಗಿದೆ. ಒಟ್ಟು 4.25 ಲಕ್ಷ ರೈತರಿಗೆ ಪ್ರಯೋಜನ.
- ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳಿಗೆ ಬಿ.ಪಿ.ಎಲ್. ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳಿಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ.
- ಬಿ.ಬಿ.ಎಂ.ಪಿ. ಮತ್ತು ನಗರ ಪ್ರದೇಶಗಳ ವ್ಯಾಪ್ತಿಯಲ್ಲಿನ ಕಾರ್ಮಿಕರು ಹಾಗೂ ಬಡವರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಊಟದ ವ್ಯವಸ್ಥೆ.
- ಕೋವಿಡ್ ಸೋಂಕಿಗೊಳಗಾದ ರೋಗಿಗಳಿಗೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ.
- ಕೋವಿಡ್ ನಿರ್ವಹಣೆಗಾಗಿ ಎಸ್.ಡಿ.ಆರ್.ಎಫ್. ಹಣವನ್ನು ಪ್ರತಿ ಗ್ರಾಮ ಪಂಚಾಯಿತಿಗಳಿಗೆ 50 ಸಾವಿರ ರೂಪಾಯಿ ಮುಂಗಡವಾಗಿ ನೀಡಲಾಗುವುದು. ಇದರಿಂದ 6 ಸಾವಿರ ಪಂಚಾಯಿತಿಗಳಿಗೆ ಅನುಕೂಲವಾಗಲಿದೆ. ಜತೆಗೆ, ಕೋವಿಡ್ ಚಿಕಿತ್ಸೆಗೆ ತೊಂದರೆ ಆಗುವುದನ್ನು ತಡೆಯಲು 2,150 ವೈದ್ಯರನ್ನು 3 ದಿನಗಳೊಳಗಾಗಿ ನೇಮಕ ಮಾಡಲಾಗುವುದು.
https://www.suddikanaja.com/2021/04/26/covid-treatment-under-ayushman-bharat/