ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕಿತರೆಲ್ಲರೂ ಮೆಗ್ಗಾನ್ ಗೆ ಬರುತ್ತಿರುವುದರಿಂದ ಅಲ್ಲಿ ಒತ್ತಡ ಅಧಿಕವಾಗಿದೆ. ಇದನ್ನು ತಡೆಗಟ್ಟುವ ಹಾಗೂ ಸೋಂಕಿತರಿಗೆ ಸರಿಯಾದ ಆರೈಕೆ ನೀಡಬೇಕು ಎಂಬ ಉದ್ದೇಶದಿಂದ ನಾಲ್ಕು ವಾರ್ಡ್ ಸೇರಿ ಒಂದು ಕೋವಿಡ್ ಕೇರ್ ಸೆಂಟರ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಕೊರೊನಾ ಹೈ ಅಲರ್ಟ್ | ಮೆಗ್ಗಾನ್ ಆಸ್ಪತ್ರೆಯ ವಾರ್ಡ್ ಗಳಲ್ಲಿ ವೈದ್ಯರ ಹೆಸರು ಪ್ರಕಟ, ಕರ್ತವ್ಯ ಲೋಪ ಎಸಗಿದರೆ ಕ್ರಮ
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಕೇರ್ ಸೆಂಟರ್ ಜವಾಬ್ದಾರಿ ಆಯಾ ವಾರ್ಡಿನ ಕಾರ್ಪೋರೇಟರ್ ಗಳಿಗೆ ವಹಿಸಲಾಗುವುದು. ನೋಡಲ್ ಅಧಿಕಾರಿಯನ್ನು ಇದಕ್ಕಾಗಿ ನೇಮಿಸಲಾಗುವುದು ಎಂದು ಹೇಳಿದರು.
ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 9 ಪ್ರಾಥಮಿಕ ಆರೋಗ್ಯ ಕೇಂದ್ರ(ಪಿ.ಎಚ್.ಸಿ)ಗಳಿದ್ದು, ಅದರ ವ್ಯಾಪ್ತಿಯಲ್ಲಿರುವ ಸಮುದಾಯ ಭವನದಲ್ಲಿ ಕೇರ್ ಸೆಂಟರ್ ತೆರೆಯಲಾಗುವುದು. ಚಿಕಿತ್ಸೆ, ಆರೈಕೆ ಕೂಡ ಆಯಾ ಪಿ.ಎಚ್.ಸಿ ಸಿಬ್ಬಂದಿ ನೋಡಿಕೊಳ್ಳಲಿದ್ದಾರೆ. 50 ಹಾಸಿಗೆಗಳು ಇಲ್ಲಿ ಲಭ್ಯ ಇರಲಿವೆ ಎಂದು ಹೇಳಿದರು.
ಶಾಸಕರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಆರ್.ಪ್ರಸನ್ನ ಕುಮಾರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಆಡಳಿತ ಪಕ್ಷ ದ ನಾಯಕ ಎಸ್.ಎನ್. ಚನ್ನಬಸಪ್ಪ, ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಎಚ್.ಸಿ. ಯೋಗೇಶ್, ನಾಗರಾಜ್ ಕಂಕಾರಿ ಉಪಸ್ಥಿತರಿದ್ದರು.
ಕೊರೊನಾ ಹೈ ಅಲರ್ಟ್ | ಮೆಗ್ಗಾನ್ ಆಸ್ಪತ್ರೆಯ ವಾರ್ಡ್ ಗಳಲ್ಲಿ ವೈದ್ಯರ ಹೆಸರು ಪ್ರಕಟ, ಕರ್ತವ್ಯ ಲೋಪ ಎಸಗಿದರೆ ಕ್ರಮ