ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಲಸಿಕೆ ಕೇಂದ್ರವೊಂದರಲ್ಲಿ ಭಾನುವಾರ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ.
ನಗರದ ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಲಸಿಕೆ ವಿಚಾರವಾಗಿ ವಾಕ್ಸಮರವೇ ನಡೆದು ಹೋಗಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿದ್ದು, ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿವೆ. ಒಬ್ಬರ ಮೇಲೊಬ್ಬರು ಕೆಸರೆರಚಾಟ ಕೂಟ ಮಾಡಿದ್ದಾರೆ.
ಆಗಿದ್ದೇನು? | ಲಸಿಕೆ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಆರೋಪಗಳನ್ನು ಮಾಡಿದ್ದಾರೆ. ಎಂ.ಎಲ್.ಎ ಹೆಸರಿನಲ್ಲಿ ಲಸಿಕೆ ಹಾಕಿಸಲಾಗುತ್ತಿದೆ. ಲಸಿಕೆ ಕೇಂದ್ರಗಳು ಬಿಜೆಪಿ ಕಚೇರಿ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ಅದಕ್ಕೆ ಪ್ರತಿಯಾಗಿ ಬಿಜೆಪಿಯವರು ಕಾಂಗ್ರೆಸ್ ಮಾಜಿ ಶಾಸಕ ಹೆಸರಿನಲ್ಲಿ ಲಸಿಕೆ ಬುಕಿಂಗ್ ಮಾಡಿಸಲಾಗುತ್ತಿದೆ. ಇದರಿಂದಾಗಿ, ಲೆಟರ್ ಹಿಡಿದುಕೊಂಡು ಬರಲಾಗುತ್ತಿದೆ. ಇದರಿಂದ ಸರದಿಯಲ್ಲಿ ಇರುವವರಿಗೆ ಸಮಸ್ಯೆ ಆಗುತ್ತಿದೆ ಎಂದು ಆರೋಪಿಸಿದ್ದಾರೆ.