ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುವವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
READ | ಪಂಚಾಯಿತಿ ಸಿಬ್ಬಂದಿಗೂ ಕೊರೊನಾ ವಾರಿಯರ್ಸ್ ಗರಿ, ನೀಡಲಾದ ಜವಾಬ್ದಾರಿಗಳೇನು ಗೊತ್ತಾ?
ಸೋಮವಾರ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮೈಸೂರು ಮತ್ತು ಬೆಂಗಳೂರು ವಿಭಾಗದ ಎಲ್ಲ ಜಿಲ್ಲೆಗಳ ಜಿಪಂ ಸಿಇಒ, ಆಯಾ ಜಿಲ್ಲೆ ವ್ಯಾಪ್ತಿಯ ಪಿಡಿಒಗಳ ವಿಡಿಯೋ ಸಂವಾದದ ಬಳಿಕ ಮಾಧ್ಯಮ ಜೊತೆ ಮಾತನಾಡಿದರು.
https://www.suddikanaja.com/2020/12/13/senior-elephant-dead-in-sakrebailu-elephant-shivamogga/
ಸೋಂಕು ನಿಯಂತ್ರಣದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ರಾಜ್ಯದ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯಿತಿಯನ್ನು ‘ಉತ್ತಮ ಗ್ರಾಮ ಪಂಚಾಯಿತಿ’ ಹಾಗೂ ತಾಲೂಕಿನ ಮೂವರನ್ನು ‘ಉತ್ತಮ ಸೇವಕ’ ಪ್ರಶಸ್ತಿಗೆ ಆಯ್ಕೆ ಮಾಡಿ ಗೌರವಿಸಲಾಗುವುದು. ಅಲ್ಲದೆ, ಪ್ರತಿ ಕೋವಿಡ್ ಉಸ್ತುವಾರಿ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದರು.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಗ್ರಾಮೀಣ ಜನರ ಸಹಕಾರ ಪಡೆದು ಕೊರೊನಾ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡುವಂತೆ ಹೇಳಿದರು.
ಕೋವಿಡ್ ನಿಯಂತ್ರಣದಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಪ್ರಮುಖವಾದುದ್ದಾಗಿದೆ. ಕೊರೊನಾ 2ನೇ ಅಲೆಯು ಅತ್ಯಂತ ಅಪಾಯಕಾರಿಯಾಗಿದ್ದು, ಅದರ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರೂ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅಗತ್ಯವಿದೆ.
ಈ ಹಿಂದೆ ರಚಿಸಲಾಗಿದ್ದ ಕಾರ್ಯಪಡೆಗಳು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿದ್ದವು. ಈ ಕಾರ್ಯಪಡೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸಿ ಹೆಚ್ಚಿನ ಜವಾಬ್ದಾರಿ ನೀಡಬೇಕಾದ ಅಗತ್ಯವಿದೆ. ಹಾಗಾದಾಗ ಸೋಂಕು ಹತೋಟಿಗೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
https://www.suddikanaja.com/2021/02/20/deputy-commissioner-kb-shivakumar-visited-shikaripura/