ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಹೊರ ಭಾಗದ ಹೊಸ ಬಡಾವಣೆಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲು 96.50 ಕೋಟಿ ರೂಪಾಯಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
https://www.suddikanaja.com/2021/02/28/cm-bs-yadiyurappa-visit-sorab/
ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಗಾಜನೂರು ಜಲಾಶಯದಿಂದ ನಗರದ ಪ್ರತಿ ಮನೆಗೆ ನೀರು ಸರಬರಾಜು ಮಾಡುವ 130.70 ಕೋಟಿ ರೂ. ವೆಚ್ಚದ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ. ಶೇ.55ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶಿವಮೊಗ್ಗ ನಗರದ ಹೊರಭಾಗದ ಕೆಲವು ಮಂಡಲ ಪಂಚಾಯತ್ ವ್ಯಾಪ್ತಿಯ ಪ್ರದೇಶಗಳು ಹಾಗೂ ನಿರ್ಮಾಣಗೊಂಡಿರುವ ಹೊಸ ವಸತಿ ಬಡಾವಣೆಗಳಿಗೆ ನೀರು ಪೂರೈಕೆ ಮಾಡಲು 96.50 ಕೋಟಿ ರೂ. ಯೋಜನೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಇದಕ್ಕೆ ಸಂಪುಟದ ಅನುಮೋದನೆ ದೊರೆತಿದ್ದು, ಆದಷ್ಟು ಬೇಗನೇ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
https://www.suddikanaja.com/2020/11/04/ranibennur-smg-railwa/
ಜಲ ಜೀವನ್ ಮಿಷನ್: ಗ್ರಾಮೀಣ ಭಾಗದಲ್ಲಿ ಪ್ರತಿ ಮನೆ ಮನೆಗೆ ನೀರು ಒದಗಿಸುವ `ಮನೆ ಮನೆಗೆ ಗಂಗೆ’ ಯೋಜನೆಯಡಿ 7 ಬೃಹತ್ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯ ಒಟ್ಟು ಮೊತ್ತ 6768.85 ಕೋಟಿ ರೂಪಾಯಿ ಇದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮುಂದಿನ ಎರಡೂವರೆ ವರ್ಷಗಳಲ್ಲಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.
https://www.suddikanaja.com/2021/01/09/administrative-approval-for-jog-development/