ಸುದ್ದಿ ಕಣಜ.ಕಾಂ
ಹೊಸನಗರ: ಶಿವಮೊಗ್ಗದ ಪ್ರಯೋಗಾಲಯಕ್ಕೆ ಪರೀಕ್ಷೆಗೆಂದು ಗಂಟಲು ದ್ರವದ ಮಾದರಿಯನ್ನು ತರುತಿದ್ದ ವಾಹನವೊಂದು ಅಪಘಾತಕ್ಕೀಡಾದ ಘಟನೆ ಸಂಭವಿಸಿದೆ.
READ | ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ, ಮುಂದುವರಿದ ಸಾವಿನ ಆರ್ಭಟ
ಹೊಸನಗರದಿಂದ ಶಿವಮೊಗ್ಗಕ್ಕೆ ಬರುವಾಗ ಗವಟೂರು ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಇಳಿದಿದೆ. ಘಟನೆಯಲ್ಲಿ ತಾಲೂಕು ವೈದ್ಯಾಧಿಕಾರಿ ಸೇರಿ ನಾಲ್ವರಿಗೆ ಗಾಯಗಳಾಗಿವೆ. ಸಣ್ಣಪುಟ್ಟ ಗಾಯಗೊಂಡಿರುವ ವೈದ್ಯಾಧಿಕಾರಿಗಳನ್ನು ರಿಪ್ಪನಪೇಟೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.