ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪಟಾಕಿ ಹಾರಿಸಿದ ನಾಲ್ವರು ಯುವಕರ ಮೇಲೆ ಲಾಕ್ ಡೌನ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
READ | ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾ ಆರ್ಭಟ, 15 ಜನರ ಸಾವು, ತಾಲೂಕುವಾರು ಮಾಹಿತಿ ಇಲ್ಲಿದೆ
ಮೇ 15 ರಂದು ಹೊಸಮನೆ ಬಡಾವಣೆಯಲ್ಲಿ ಯುವಕರು ಜನ್ಮ ದಿನಾಚರಣೆ ಹಿನ್ನೆಲೆ ಮಧ್ಯರಾತ್ರಿ ಪಟಾಕಿ ಹಾರಿಸಿದ್ದರು.
ಕೊರೊನಾ ಸೋಂಕು ತಡೆಗೆ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಅದನ್ನು ಉಲ್ಲಂಘಿಸಿದ್ದಾರೆಂಬ ಕಾರಣಕ್ಕೆ ಅವರ ಮೇಲೆ ಪ್ರಕರಣ ದಾಖಲಾಗಿದೆ. ನಾಲ್ವರು ಯುವಕರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.