ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕಾಗಿ ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕುವುದಕ್ಕಾಗಿ ಜಿಲ್ಲೆಯಲ್ಲಿ ಪೊಲೀಸರಿಗೆ ಫುಲ್ ಪವರ್ ನೀಡಲಾಗಿದೆ. ಹೊರಗಡೆ ಬಂದಲ್ಲಿ ಮುಲಾಜಿಲ್ಲದೇ ಪೊಲೀಸರು ವಾಹನಗಳನ್ನು ಸೀಜ್ ಮಾಡಲಿದ್ದಾರೆ. ಹೀಗಾಗಿ, ಮನೆಯಲ್ಲೇ ಇದ್ದು ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಹಿರಿಯ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ವಿಡಿಯೋಗಾಗಿ ಕೆಳಗಿನ ಲಿಂಕ್ ಅನ್ನು ಒತ್ತಿ
ನಾಳೆಯಿಂದ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನಿಂದ ಲಾಕ್ ಡೌನ್ ಜಾರಿಯಾಗಲಿದ್ದು, ಜನರು ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ನಡೆದುಕೊಂಡು ಹೋಗಿ ಖರೀದಿಸಲು ಮಾತ್ರ ಅವಕಾಶವಿದೆ ಎಂದು ಹೇಳಿದರು.
ಆಸ್ಪತ್ರೆಗೆ ತೆರಳುವಂತಹ ಅಗತ್ಯ ಸಂದರ್ಭದಲ್ಲಿ ಮಾತ್ರ ವಾಹನ ಬಳಸಬಹುದಾಗಿದೆ. ಮೆಡಿಕಲ್ ಗಳಿಗೆ ಸ್ಥಳೀಯವಾಗಿ ನಡೆದುಕೊಂಡೇ ಹೋಗಬೇಕು. ಇತರ ಕಾರಣಗಳಿಗೆ ರಸ್ತೆಗೆ ಬರುವ ವಾಹನವನ್ನು ಲಾಕ್ ಡೌನ್ ಮುಗಿಯುವ ತನಕ ಜಪ್ತಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು. ಸ್ಥಳೀಯವಾಗಿ ಗುರುತಿಸಲಾಗಿರುವ ಜೋನ್ ವ್ಯಾಪ್ತಿಯಲ್ಲಿ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಪ್ರತಿ ಜೋನ್ ನಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ಸಂಚಾರ ನಿಬರ್ಂಧಿಸಲಾಗುವುದು. ಈ ಎಲ್ಲವುಗಳನ್ನು ಕಟ್ಟುನಿಟ್ಟಿನಿಂದ ಅನುಷ್ಠಾನಗೊಳಿಸಲು ಪೆÇಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
READ | ಎಪಿಎಂಸಿ ಒಳಗೆ ಚಿಲ್ಲರೆ ವ್ಯಾಪಾರಕ್ಕಿಲ್ಲ ಅವಕಾಶ, ಅದಕ್ಕೆ ಪಾಲಿಕೆಯಿಂದ 6 ಪ್ರತ್ಯೇಕ ಜೋನ್, ಎಲ್ಲೆಲ್ಲಿ ಗೊತ್ತಾ?
70 ವಾಹನ ಒದಗಿಸಲಾಗಿದೆ | ನಗರದ ಎಲ್ಲ ವಾರ್ಡ್ ಗಳಲ್ಲಿ ತರಕಾರಿ ಹಣ್ಣುಗಳನ್ನು ಮಾರಾಟ ಮಾಡಲು ಹಾಪ್ ಕಾಮ್ಸ್ ಗೆ 70 ವಾಹನಗಳನ್ನು ಒದಗಿಸಲಾಗಿದೆ. ಈ ವಾಹನ ಎಲ್ಲ ವಾರ್ಡ್ ಗಳಲ್ಲಿ ಬೆಳಗ್ಗೆ 6ರಿಂದ 12ರವರೆಗೆ ಸಂಚರಿಸಲಿವೆ ಎಂದರು.
ಸ್ಟೇಡಿಯಂ, ವಾಕಿಂಗ್ ಗೆ ಅವಕಾಶವಿಲ್ಲ | ಸಭೆಯಲ್ಲಿ ಮಾತನಾಡಿದ ಸಚಿವರು, ಮೆಗ್ಗಾನ್ ಆಸ್ಪತ್ರೆಯ ಒಳಗೆ ಕೋವಿಡ್ ರೋಗಿಗಳ ಬಳಿಗೆ ಅವರ ಸಂಬಂಧಿಕರು ತೆರಳಲು ಅವಕಾಶ ನೀಡಬಾರದು. ಬೆಳಗ್ಗೆ ವಾಕಿಂಗ್ ಹೋಗಲು ಅನುಮತಿ ಇರುವುದಿಲ್ಲ. ಎಲ್ಲಾ ಉದ್ಯಾನವನ, ಸ್ಟೇಡಿಯಂ ಕಟ್ಟುನಿಟ್ಟಿನಿಂದ ಮುಚ್ಚಬೇಕು. ಮದುವೆಗೆ ಒಟ್ಟು 40ಮಂದಿಗೆ ಮಾತ್ರ ಅವಕಾಶವಿದ್ದು, ಅಗತ್ಯ ಪಾಸುಗಳನ್ನು ತಹಶೀಲ್ದಾರ್ ಕಚೇರಿಯಿಂದ ಪಡೆಯಬೇಕು. ಗಡಿಭಾಗದಲ್ಲಿರುವ ಜಮೀನುಗಳಿಗೆ ಕೃಷಿ ಚಟುವಟಿಕೆಗಳಿಗೆ ತೆರಳಲು ಅನುಮತಿ ನೀಡುವ ಕುರಿತು ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ಕುಮಾರ ಬಂಗಾರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
https://www.suddikanaja.com/2020/11/12/new-police-station-and-facility-to-police-department/