ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಮೇ 31ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದ್ದು, ಈ ಅವಧಿಯಲ್ಲಿ ಜನಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇ 31ರ ಬೆಳಗ್ಗೆ 10 ಗಂಟೆಯೊಳಗೆ ಅಗತ್ಯವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಅದರ ಹೊರತಾಗಿ ಒಂದು ವಾರ ಏನನ್ನೂ ಖರೀದಿಸುವುದಕ್ಕಾಗಿ ರಸ್ತೆಗೆ ಇಳಿಯಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
https://www.suddikanaja.com/2021/05/28/two-days-lock-down-in-bhadravathi/
ಲಾಕ್ಡೌನ್ ಕುರಿತು ಎಲ್ಲ ಶಾಸಕರ ಜೊತೆ ಮಾತನಾಡಿ, ಚರ್ಚಿಸಿ ಸಹಮತದ ಬಳಿಕ ಸಂಪೂರ್ಣ ಲಾಕ್ಡೌನ್ ಗೆ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೆ ಸಾರ್ವಜನಿಕರು ಸಹಕಾರ ನೀಡಿದ್ದು, ಮುಂದೆಯೂ ನೀಡಬೇಕಾಗಿ ಈಶ್ವರಪ್ಪ ಮನವಿ ಮಾಡಿದರು.
ತರಕಾರಿ, ದಿನಸಿ ಅಂಗಡಿಗಳಿಗೆ ಬೆಳಿಗ್ಗೆ 6ರಿಂದ 8ರವರೆಗೆ ತೆರೆಯಲು ಅವಕಾಶವಿದೆ. ಅವಶ್ಯಕ ಸೇವೆಗಳಿಗೆ ಗುರುತಿಸಲಾಗಿರುವ ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಬೇರೆಲ್ಲ ಕಚೇರಿಗಳು, ಬ್ಯಾಂಕ್ ಸೇವೆ ಸಹ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು.
ಹೊಟೇಲ್ ನಲ್ಲಿ ಪಾರ್ಸೆಲ್ ಸೇವೆಗೆ ಅವಕಾಶವಿದೆ. ಮಾರ್ಗಸೂಚಿ ಪ್ರಕಾರ ಮದುವೆಗೆ ಅವಕಾಶವಿದೆ. ಆದರೆ ಮದುವೆಗೆ ಸಂಬಂಧಿಸಿದ ಸಮಾರಂಭಗಳು, ಗೃಹ ಪ್ರವೇಶ ಇತ್ಯಾದಿಗಳಿಗೆ ಅನುಮತಿ ಇರುವುದಿಲ್ಲ.
https://www.suddikanaja.com/2021/05/11/shivamogga-city-complete-lockdown-for-four-days/
ಈಗಾಗಲೇ ಅನುಮತಿ ನೀಡಲಾಗಿರುವ ಅಗತ್ಯ ಕೈಗಾರಿಕಾ ಚಟುವಟಿಕೆಗಳಿಗೆ, ಕೃಷಿ ಚಟುವಟಿಕೆಗಳಿಗೆ ಅವಕಾಶ ಇರುವುದು. ಅಗತ್ಯ ವಸ್ತುಗಳ ಪೂರೈಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ . ಲಾಕ್ ಡೌನ್ ಅವಧಿಯಲ್ಲಿ ಅನಗತ್ಯವಾಗಿ ರಸ್ತೆಗೆ ಬರುವ ವಾಹನಗಳನ್ನು ಜಪ್ತಿ ಮಾಡುವುದು ಮಾತ್ರವಲ್ಲದೆ, ಸವಾರರ ಮೇಲೆ ಕ್ರಮ ಕೈಗೊಳ್ಳಲು ಪೆÇಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.
ಡಿಸಿ ಶಿವಕುಮಾರ್, ಎಸ್ಪಿ ಲಕ್ಷ್ಮೀಪ್ರಸಾದ್, ಜಿಪಂ ಸಿಇಒ ವೈಶಾಲಿ ಉಪಸ್ಥಿತರಿದ್ದರು.
ಏನಿರುತ್ತೆ? | ಮೆಡಿಕಲ್, ಸಣ್ಣಪುಟ್ಟ ದಿನಸಿ ಅಂಗಡಿಗಳು, ಆಸ್ಪತ್ರೆ, ಹಾಲು, ತಳ್ಳು ಗಾಡಿಯಲ್ಲಿ ತರಕಾರಿ ಮಾರಾಟಕ್ಕೆ ಮಾತ್ರ ಅವಕಾಶ.
ಏನಿರಲ್ಲ | ಸಗಟು ವ್ಯಾಪಾರ, ಎಪಿಎಂಸಿ, ಮೆಡಿಕಲ್, ತರಕಾರಿ ಅಂಗಡಿ, ವಾಹನಗಳ ಸಂಚಾರಕ್ಕೆ ಪೂರ್ಣ ನಿರ್ಬಂಧ.
https://www.suddikanaja.com/2020/12/23/night-curew-due-to-corona-mutated-virus-sars-cov-2-found-in-london/