ಸುದ್ದಿ ಕಣಜ.ಕಾಂ
ಶಿರಾಳಕೊಪ್ಪ: ಲಾಕ್ ಡೌನ್ ನಿಯಮಉಲ್ಲಂಘಿಸಿ ವ್ಯಾಪಾರ ಮಾಡುತಿದ್ದ ಅಂಗಡಿ ಮಾಲೀಕರನ್ನು ಠಾಣೆಗೆ ಕರೆದು ಎಚ್ಚರಿಕೆ ನೀಡಲಾಗಿದೆ.
READ | ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಕೊರೊನಾ ಶತಕ, 14 ಸಾವು, ಎಲ್ಲಿ ಎಷ್ಟು ಪ್ರಕರಣ?
ಶಿರಾಳಕೊಪ್ಪದಲ್ಲಿ ಡಿವೈಎಸ್ಪಿ ಶಿವಾನಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, 25 ಅಂಗಡಿಗಳ ಮೇಲೆ ದಾಳಿ ನಡೆಸಿ 35 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ಪಿಎಸ್ಐ ಟಿ.ರಮೇಶ್, ಪುರಸಭೆಯ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಜೊತೆ ದಾಳಿ ನಡೆಸಲಾಗಿದೆ. ಜತೆಗೆ, ಇನ್ಮುಂದೆ ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದ ಅಂತಹ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ.