ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭದ್ರಾವತಿಯಲ್ಲಿ ವಿಐಎಸ್ಎಲ್ ಅಧೀನದಲ್ಲಿರುವ ಆಕ್ಸಿಜನ್ ತಯಾರಿಕಾ ಘಟಕವನ್ನು ಸಕ್ರಿಯಗೊಳಿಸಲು ನಿರ್ಧರಿಸಲಾಗಿದ್ದು, ವಾರದೊಳಗಾಗಿ ಉತ್ಪಾದನೆ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
https://www.suddikanaja.com/2021/04/26/oxygen-plants-in-bhadravathi-and-sagar/
ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಐಎಸ್.ಎಲ್ ಅವರೊಂದಿಗೆ ಎಂಎಸ್.ಪಿಎಲ್ ಸಂಸ್ಥೆ ಆಕ್ಸಿಜನ್ ಉತ್ಪಾದಿಸಿಕೊಡುವ ಒಪ್ಪಂದ ಮಾಡಿಕೊಂಡಿದ್ದು, ಸದ್ಯಕ್ಕೆ ಅದರ ಅವಧಿ ಮುಗಿದಿರುತ್ತದೆ. ಜಿಲ್ಲಾಡಳಿತದ ಕೋರಿಕೆಯಂತೆ ಇದೀಗ ಆಕ್ಸಿಜನ್ ಉತ್ಪಾದಿಸಲು ಎಂಎಸ್.ಪಿಎಲ್ ಮುಂದೆ ಬಂದಿದೆ ಎಂದು ಹೇಳಿದರು.
ನಿತ್ಯ 320 ಕೆಎಲ್.ಡಿ ಆಕ್ಸಿಜನ್ | ಪ್ರತಿ ದಿನ 320 ಕೆಎಲ್.ಡಿ ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯ ಈ ಘಟಕಕ್ಕೆ ಇದೆ. ಉತ್ಪಾದಿಸಿದ ಆಕ್ಸಿಜನ್ ವಿಐಎಸ್.ಎಲ್ ತಮ್ಮಲ್ಲಿರುವ ಜಂಬೋ ಸಿಲಿಂಡರ್ ಗಳ ಮೂಲಕ ಬಾಟ್ಲಿಂಗ್ ಮಾಡಲಿದ್ದಾರೆ. ಆದರೆ ಪ್ರತಿದಿನ ಕೇವಲ 8 ಕೆಎಲ್.ಡಿ ಆಕ್ಸಿಜನ್ ಮಾತ್ರ ಬಾಟ್ಲಿಂಗ್ ಮಾಡುವ ಸಾಮರ್ಥ್ಯ ಇಲ್ಲಿದ್ದು, ಲಿಕ್ವಿಡ್ ಆಕ್ಸಿಜನ್ ಆಗಿ ಪರಿವರ್ತಿಸುವ ತಾಂತ್ರಿಕ ವ್ಯವಸ್ಥೆ ಇಲ್ಲಿರುವುದಿಲ್ಲ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರರು ಉಪಸ್ಥಿತರಿದ್ದರು.
https://www.suddikanaja.com/2021/05/04/covid-meeting-in-bhadravathi/