ಸುದ್ದಿ ಕಣಜ.ಕಾಂ
ಭದ್ರಾವತಿ: ವ್ಯಕ್ತಿಯೊಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಗೂಡ್ಸ್ ವಾಹನ ಕಳವು ಪ್ರಕರಣದ ಆರೋಪಿಗಳನ್ನು ಕೇವಲ 24 ಗಂಟೆಯೊಳಗೆ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
READ | ‘ಪಾರು’ ಧಾರಾವಾಹಿಯಿಂದ ಮಾನ್ಸಿ ಜೋಶಿ ಎಕ್ಸಿಟ್, ಜರ್ನಿಯ ಅನುಭವ ಇಲ್ಲಿ ಹಂಚಿಕೊಂಡಿದ್ದಾರೆ…
ಬೊಮ್ಮನಕಟ್ಟೆಯ ನಿವಾಸಿ ಸೈಯ್ಯದ್ ತೌಸಿಫ್ ಎಂಬಾತ ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ವಾಹನವನ್ನು ಶನಿವಾರ ರಾತ್ರಿ ಕಳವು ಮಾಡಿದ್ದರು. ಪ್ರಕರಣ ದಾಖಲಿಸಿದ ತಕ್ಷಣ ಕಾರ್ಯಪ್ರವೃತರಾದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಯಾರು ಬಂಧಿತರು | ಸೊರಬದ ಅಹಮದ್ (23) ಹಾಗೂ ಅಶೊಕನಗರದ ಹಿದಾಯತ್ ಷರೀಫ್ (19)ಬಂಧಿತರು. ಇವರಿಂದ ಕಳವು ಮಾಡಿದ ಮೂರೂವರೆ ಲಕ್ಷ ರೂಪಾಯಿ ಮೌಲ್ಯದ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಪೇಪರ್ ಟೌನ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.