ಸುದ್ದಿ ಕಣಜ.ಕಾಂ
ಬೆಂಗಳೂರು: ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಅನ್ನು ಜೂನ್ 14ರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಸಂಬಂಧ ಗುರುವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಆದರೂ ವೈರಾಣು ಹರಡುವಿಕೆ ಸರಪಳಿ ಮುಂದುವರಿದಿದೆ. ಹೀಗಾಗಿ, ತಜ್ಞರ ಸಲಹೆಯ ಮೇರೆಗೆ ಲಾಕ್ಡೌನ್ ಅನ್ನು ಮುಂದುವರಿಸಲಾಗುತ್ತಿದೆ ಎಂದರು.
ಜೂನ್ 7ರ ವರೆಗೆ ಲಾಕ್ಡೌನ್ ಹೇರಲಾಗಿತ್ತು. ಅದೇ ರೀತಿ, ಮಾರ್ಗಸೂಚಿಗಳನ್ನು ಒಳಗೊಂಡು ಜೂನ್ 14ರ ವರೆಗೆ ಲಾಕ್ಡೌನ್ ವಿಧಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.