ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆರ್.ಎಂ.ಎಲ್. ನಗರದ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ಅನ್ನು ಅಮಾನತುಗೊಳಿಸಲಾಗಿದೆ.
ನ್ಯಾಯ ಬೆಲೆ ಅಂಗಡಿಯಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವಂತೆ ಸರ್ಕಾರದ ನಿರ್ದೇಶನವಿದ್ದು, ಅದನ್ನು ಪಾಲಿಸದೇ ಇರುವ ಬಗ್ಗೆ ದೂರುಗಳು ಬಂದಿದ್ದವು. ಜತೆಗೆ, ಒತ್ತಾಯ ಪೂರ್ವಕವಾಗಿ ಅಕ್ಕಿಯೊಂದಿಗೆ ಸಾಬೂನು ಮಾರಾಟ ಮಾಡುತ್ತಿದ್ದರು ಎಂಬ ದೂರು ಬಂದಿದ್ದವು. ಈ ಹಿನ್ನೆಲೆ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ಪರಿಶೀಲಿಸಿದ ಬಳಿಕ ಲೈಸೆನ್ಸ್ ಅನ್ನು ಅಮಾನತುಗೊಳಿಸಲಾಗಿದೆ.