ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕಠಿಣ ಲಾಕ್ ಡೌನ್ ನಿಯಮಾವಳಿಗಳು ಜೂನ್ 14ರ ವರೆಗೆ ಮುಂದುವರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಘೋಷಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
https://www.suddikanaja.com/2021/05/29/one-week-complete-lockdown-in-shivamogga/
ಪ್ರಸ್ತುತ ಇರುವ ಲಾಕ್ ಡೌನ್ ನಿಯಮಾವಳಿಗಳು ಮುಂದಿನ ಒಂದು ವಾರ ಕಾಲ ಜಾರಿಯಲ್ಲಿರಲಿವೆ. ದಿನಸಿ, ತರಕಾರಿಯಂತಹ ಅಗತ್ಯ ಸಾಮಗ್ರಿಗಳ ಮಾರಾಟಕ್ಕೆ ಬೆಳಗ್ಗೆ 6ರಿಂದ 8ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಏನಿರಲಿದೆ? | ಈಗಾಗಲೇ ಅನುಮತಿ ನೀಡಲಾಗಿರುವ ಕೈಗಾರಿಕಾ ಉತ್ಪನ್ನಗಳ ಉತ್ಪಾದನೆಗೆ ಅವಕಾಶವಿದೆ. ಮದ್ಯ ಮಾರಾಟ (ಪಾರ್ಸೆಲ್)ಕ್ಕೆ ಬೆಳಗ್ಗೆ 6ರಿಂದ 8ರ ವರೆಗೆ ಅವಕಾಶ ನೀಡಲಾಗಿದೆ. ಎಪಿಎಂಸಿಯಲ್ಲಿ ಸರಕು ಸಾಮಗ್ರಿಗಳನ್ನು ಸರಕು ವಾಹನಗಳಿಂದ ಇಳಿಸಲು ಮತ್ತು ಲೋಡ್ ಮಾಡಲು ಯಾವುದೇ ನಿಬರ್ಂಧ ಇರುವುದಿಲ್ಲ ಎಂದು ಹೇಳಿದರು.
ಶಾಸಕರಾದ ಕುಮಾರ ಬಂಗಾರಪ್ಪ, ಆಯನೂರು ಮಂಜುನಾಥ, ರುದ್ರೇಗೌಡ, ಪ್ರಸನ್ನಕುಮಾರ್, ಎಸ್ಪಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ದತ್ತಾತ್ರೇಯ, ಜ್ಯೋತಿ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
https://www.suddikanaja.com/2021/05/21/lockdown-extended-by-state-government-in-karnataka/