ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜೂನ್ 11ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ. ಕೊರೊನಾ ಎರಡನೇ ಅಲೆಗೂ ಮುಂಚೆ ಶಿವಮೊಗ್ಗಕ್ಕೆ ಆಗಮಿಸಿದ್ದರು.
https://www.suddikanaja.com/2021/06/08/corona-positive-case-increase-in-shivamogga/
11ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೊರಟು 11ಕ್ಕೆ ಹಾಸನಕ್ಕೆ ಬರಲಿದ್ದಾರೆ. 11.15ಕ್ಕೆ ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತದೊಂದಿಗೆ ಕೊರೊನಾ ನಿಯಂತ್ರಣ ಮತ್ತು ಇತರೆ ಅಭಿವೃದ್ಧಿ ವಿಷಯಗಳ ಕುರಿತು ಪರಿಶೀಲನಾ ಸಭೆ ನಡೆಸುವರು.
12.45ಕ್ಕೆ ಹಾಸನದಿಂದ ಹೊರಟು 1.30ಕ್ಕೆ ಶಿಕಾರಿಪುರ ಹೆಲಿಪ್ಯಾಡ್ ಗೆ ಬರಲಿದ್ದಾರೆ. ಸಂಜೆ 4 ಗಂಟೆಗೆ ಶಿಕಾರಿಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಅಂದು ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
https://www.suddikanaja.com/2021/05/09/covid-vaccine-to-above-18/
ಜೂನ್ 12ರಂದು ಮಧ್ಯಾಹ್ನ 3.30ಕ್ಕೆ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ರಸ್ತೆ ಮಾರ್ಗದ ಮೂಲಕ ಆಗಮಿಸಿ 4 ಗಂಟೆಗೆ ಶಿವಮೊಗ್ಗ ತಲುಪಲಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಅಭಿವೃದ್ಧಿ ವಿಷಯಗಳ ಬಗ್ಗೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ವಾಪಸ್ ಶಿಕಾರಿಪುರಕ್ಕೆ ತೆರಳಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಜೂನ್ 13ರಂದು ಬೆಳಗ್ಗೆ 11 ಗಂಟೆಗೆ ಶಿಕಾರಿಪುರದಿಂದ ಹೊರಟು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಬಿ.ಪಿ.ಚನ್ನಬಸವೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://www.suddikanaja.com/2021/03/09/huge-explosive-found-in-shivamogga/