ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗೋವಿಂದಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಆಶ್ರಯ ಮನೆಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಪಾಲಿಕೆ ಕಾಂಗ್ರೆಸ್ ಪಕ್ಷದ ನಿಯೋಗವು ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದೆ.
https://www.suddikanaja.com/2021/04/05/no-pooja-room-in-model-shelter-homes/
ಜಿ+2 ಮಾದರಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಆದರೆ, ಕಾಮಗಾರಿ ಆಮೆವೇಗದಲ್ಲಿ ಸಾಗುತ್ತಿದೆ. ಎಸ್ಸಿ, ಎಸ್ಟಿ ವರ್ಗದವರಿಗೆ 49,671ರೂ., ಸಾಮಾನ್ಯ ವರ್ಗದವರಿಗೆ 73,671 ರೂ. ಡಿಡಿ ಮೂಲಕ ಕಟ್ಟಿಸಿಕೊಂಡು ವರ್ಷಗಳು ಕಳೆದಿವೆ. ಆದರೆ, ಕನಸಿನ ಮನೆ ಮಾತ್ರ ನಿರ್ಮಾಣವಾಗಿಲ್ಲ ಎಂದು ಆರೋಪಿಸಿದ್ದಾರೆ.
2019ರಲ್ಲಿ ಶಿವಮೊಗ್ಗದಲ್ಲಿ 964 ಮನೆ ಕಟ್ಟಿಕೊಡಲು ಕೊಳಚೆ ನಿರ್ಮೂಲನ ಮಂಡಳಿಗೆ ಹಣ ನೀಡಲಾಗಿತ್ತು. ಮನೆ ಕಟ್ಟಿಕೊಡಲು ಏಪ್ರಿಲ್ ತಿಂಗಳ ಡೆಡ್ ಲೈನ್ ನೀಡಲಾಗಿತ್ತು. ಆದರೆ ಕೇವಲ 342 ಮನೆಗಳು ಮಾತ್ರ ಪೂರ್ಣಗೊಂಡಿವೆ. ಉಳಿದ 622 ಮನೆಗಳು ಯಾವುದೇ ರೀತಿಯ ಪ್ರಗತಿ ಕಂಡಿಲ್ಲ. ಕೂಡಲೇ ಕಾಮಗಾರಿ ಮುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಪಾಲಿಕೆ ವಿಡೋಧ ಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಬಿ.ಎ.ರಮೇಶ್ ಹೆಗ್ಡೆ, ಎಚ್.ಸಿ.ಯೋಗೇಶ್, ಆರ್.ಸಿ.ನಾಯಕ್ ಉಪಸ್ಥಿತರಿದ್ದರು.
https://www.suddikanaja.com/2021/06/06/gopishettikoppa-ashraya-scheme-house/