ಸುದ್ದಿ ಕಣಜ.ಕಾಂ
ಸಾಗರ: ಸೊಪ್ಪು ಕಡಿಯುವಾಗ ಮರದಿಂದ ಬಿದ್ದು ಪ್ರಗತಿಪರ ರೈತನೊಬ್ಬ ಮೃತಪಟ್ಟಿದ್ದಾರೆ.
ಆನಂದಪುರಂ ಸಮೀಪದ ಸರಗುಂದ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುತ್ರಿ ಮಹೇಶ್ ಗೌಡ (60) ಎಂಬುವವರು ಮೃತಪಟ್ಟಿದ್ದಾರೆ.
ಮರದಿಂದ ಬಿದ್ದು ಕುತ್ತಿಗೆ ಮತ್ತು ಸೊಂಟದ ಭಾಗಕ್ಕೆ ಗಾಯವಾಗಿದ್ದರಿಂದ ಮಹೇಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.