ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ವಿವಿಧ ಪೆಟ್ರೋಲ್ ಬಂಕ್ ಎದುರು ತಮಟೆ ಚಳವಳಿ ನಡೆಸಲಾಯಿತು.
ಕೇಂದ್ರ ಸರ್ಕಾರದ ಅಣುಕು ಪ್ರದರ್ಶನ ಮಾಡಿದ ಜಿಲ್ಲಾ ಯುವ ಕಾಂಗ್ರೆಸ್ ತಮಟೆ ಬಾರಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿತು.
VIDEO REPORT
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಗ್ರಾಮಾಂತರ ಅಧ್ಯಕ್ಷ ಈ.ಟಿ.ನಿತೀನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್, ಎಸ್.ಕುಮಾರೇಶ್, ಸೈಯದ್ ಜಮೀಲ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಆರ್.ಕಿರಣ್, ಟಿ.ವಿ.ರಂಜಿತ್, ಪದಾಧಿಕಾರಿಗಳಾದ ಎಂ.ರಾಹುಲ್, ವೆಂಕಟೇಶ್ ಕಲ್ಲೂರು, ಪುಷ್ಪಕ್ ಕುಮಾರ್ ಪವನ್, ರಾಕೇಶ್, ವಿ.ಶರತ್, ರಾಹುಲ್, ಗೋವಿಂದ್ ವರ್ಮಾ, ಪ್ರಜ್ವಲ್, ಇರ್ಫಾನ್, ಶ್ರೀನಿವಾಸ್, ಗೋಪಿ, ರಾಘವೇಂದ್ರ, ಮಂಜುನಾಥ್, ವಿಜಯ್ ಭಾಗವಹಿಸಿದ್ದರು.